9:28 AM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ; ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆ ಮಾಡಿದ್ದ ಸತಿ

14/09/2025, 17:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪರಿಹಾರದ ಆಸೆಗಾಗಿ ಪತ್ನಿಯು ಪತಿಯನ್ನೇ ಕೊಂದು ನಂತರ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಈಗ ಸಿಕ್ಕಿಬಿದ್ದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕ ಹೆಜ್ಜೂರು ಗ್ರಾಮದ ನಿವಾಸಿ ವೆಂಕಟಸ್ವಾಮಿ ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಪತ್ನಿ ಸಲ್ಲಾಪುರಿ ಎಂಬಾಕೆಯೇ ತನ್ನ ಗಂಡ ವೆಂಕಟಸ್ವಾಮಿಯನ್ನ ಹತ್ಯೆಗೈದು ನಂತರ ಹುಲಿ ಕೊಂದಿದೆ ಎಂದು ನಾಟಕವಾಗಿ ಇದೀಗ ಸಿಕ್ಕಿಬಿದ್ದಿದ್ದಾಳೆ. ಕಳೆದ ಕೆಲ ವರ್ಷಗಳಿಂದ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ಸಣ್ಣ ಮನೆಯೊಂದನ್ನು ಕಟ್ಟಿಕೊಂಡು ದಂಪತಿ ವಾಸವಾಗಿದ್ದರು. ಆದರೆ ಕಳೆದ ಕೆಲ ದಿನಗಳಿಂದ ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಸಲ್ಲಾಪುರಿ ಪೊಲೀಸರಿಗೆ ದೂರು ನೀಡಿದ್ದಳು. ಅಷ್ಟೇ ಅಲ್ಲದೆ ಪತಿಯನ್ನು ಹುಲಿ ಎಳೆದುಕೊಂಡು ಹೋಗಿರಬಹುದು ಎಂದು ಅನುಮಾನ ಕೂಡ ವ್ಯಕ್ತಪಡಿಸಿದ್ದಳು.
ಈ ಮಧ್ಯೆ ಕೆಲ ದಿನಗಳ ಹಿಂದೆ ಹೆಜ್ಜೂರು ಗ್ರಾಮದ ಬಳಿಯಲ್ಲಿ ಹುಲಿ ಓಡಾಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಪತ್ನಿ ಸಲ್ಲಾಪುರಿ ಹುಲಿ ಕೊಂದಿದೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ್ದ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ವೆಂಕಟಸ್ವಾಮಿಗೆ ಹುಡುಕಾಡಿದ್ದಾರೆ. ಪರಿಶೀಲನೆ ವೇಳೆ ಪ್ರಾಣಿ ಹೆಜ್ಜೆ ಗುರುತು ಪ್ತತೆಯಾಗಿತ್ತು. ಆದರೇ ಹುಲಿ ಎಲ್ಲೂ ಕಂಡಿರಲಿಲ್ಲ. ಮನೆ ಹಿಂದಿನ ತಿಪ್ಪೆಗುಂಡಿಯಲ್ಲೇ ವೆಂಕಟಸ್ವಾಮಿ ಶವ ಪತ್ತೆಯಾಗಿತ್ತು. ಈ ಬಗ್ಗೆ ಪೊಲೀಸ್ ವಿಚಾರಿಸಿದಾಗ, ಪರಿಹಾರದ ಆಸೆಗೆ ಪತಿಯನ್ನು ಕೊಂದು, ಈ ನಾಟಕ ಆಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಮುದ್ದೆಯಲ್ಲಿ ವಿಷ ಬೆರೆಸಿ ಕೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು