9:04 PM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಕೆರೆಯಲ್ಲಿ ಸಿಲುಕಿಕೊಂಡು ಕಾಡಾನೆ ಮರಿ ಪರದಾಟ: 2 ದಿನ ಕಳೆದರೂ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ; ಸಾರ್ವಜನಿಕರ ಆಕ್ರೋಶ

08/07/2026, 20:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ದೇವರಪುರ ಗ್ರಾಮದ ಕನ್ನಬಾಡಿ ಎಂಬಲ್ಲಿ ಕಳೆದೆರಡು ದಿನಗಳಿಂದ ಆನೆ ಮರಿಯೊಂದು ಸ್ಥಳೀಯ ಕೆರೆಯೊಂದರಲ್ಲಿ ಸಿಲುಕಿಕೊಂಡಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
ಕಾಡಿನಿಂದ ನಾಡಿಗೆ ಬಂದಿದ್ದ ಈ ಆನೆ ಮರಿ, ಪ್ರಸ್ತುತ ಕೆರೆಯ ನೀರಿನಲ್ಲೇ ನಿಂತಿದ್ದು, ಇದನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಮುಗಿಬೀಳುತ್ತಿದ್ದಾರೆ.

*ನಡೆದಿದ್ದೇನು?*
ಸ್ಥಳೀಯ ಮೂಲಗಳ ಪ್ರಕಾರ, ಆಹಾರ ಮತ್ತು ನೀರನ್ನು ಹುಡುಕಿಕೊಂಡು ಕಾಡಿನಿಂದ ಬಂದಿದ್ದ ಆನೆಗಳ ಹಿಂಡಿನಲ್ಲಿದ್ದ ಈ ಮರಿ ಆಕಸ್ಮಿಕವಾಗಿ ಕನ್ನಬಾಡಿ ಗ್ರಾಮದ ಕೆರೆಗೆ ಇಳಿದಿದೆ. ಕೆರೆಯ ಆಳ ಹಾಗೂ ಕೆಸರಿನ ಕಾರಣದಿಂದಾಗಿ ಅಥವಾ ಹಿಂಡಿನಿಂದ ಬೇರ್ಪಟ್ಟ ಆತಂಕದಿಂದಾಗಿ ಆನೆ ಮರಿಯು ಕಳೆದ ಎರಡು ದಿನಗಳಿಂದ ಕೆರೆಯಿಂದ ಹೊರಬರಲಾಗದೆ ನೀರಿನಲ್ಲೇ ಕಾಲ ಕಳೆಯುತ್ತಿದೆ.
ಕಾಡಾನೆಗಳ ಹಿಂಡು ಸದ್ಯ ಈ ಭಾಗದ ಆಸುಪಾಸಿನಲ್ಲೇ ಇರಬಹುದು ಎಂದು ಶಂಕಿಸಲಾಗಿದ್ದು, ಮರಿಯು ಭಯದಿಂದ ಕೆರೆಯ ಮಧ್ಯದಲ್ಲೇ ಆಶ್ರಯ ಪಡೆದಿದೆ ಎನ್ನಲಾಗಿದೆ. ದಿನವಿಡೀ ನೀರಿನಲ್ಲೇ ಇರುವುದರಿಂದ ಆನೆ ಮರಿಯ ಆರೋಗ್ಯದ ಬಗ್ಗೆಯೂ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು