6:57 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕೆರೆಯಲ್ಲಿ ಸಿಲುಕಿಕೊಂಡು ಕಾಡಾನೆ ಮರಿ ಪರದಾಟ: 2 ದಿನ ಕಳೆದರೂ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ; ಸಾರ್ವಜನಿಕರ ಆಕ್ರೋಶ

08/07/2026, 20:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ದೇವರಪುರ ಗ್ರಾಮದ ಕನ್ನಬಾಡಿ ಎಂಬಲ್ಲಿ ಕಳೆದೆರಡು ದಿನಗಳಿಂದ ಆನೆ ಮರಿಯೊಂದು ಸ್ಥಳೀಯ ಕೆರೆಯೊಂದರಲ್ಲಿ ಸಿಲುಕಿಕೊಂಡಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.
ಕಾಡಿನಿಂದ ನಾಡಿಗೆ ಬಂದಿದ್ದ ಈ ಆನೆ ಮರಿ, ಪ್ರಸ್ತುತ ಕೆರೆಯ ನೀರಿನಲ್ಲೇ ನಿಂತಿದ್ದು, ಇದನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಮುಗಿಬೀಳುತ್ತಿದ್ದಾರೆ.

*ನಡೆದಿದ್ದೇನು?*
ಸ್ಥಳೀಯ ಮೂಲಗಳ ಪ್ರಕಾರ, ಆಹಾರ ಮತ್ತು ನೀರನ್ನು ಹುಡುಕಿಕೊಂಡು ಕಾಡಿನಿಂದ ಬಂದಿದ್ದ ಆನೆಗಳ ಹಿಂಡಿನಲ್ಲಿದ್ದ ಈ ಮರಿ ಆಕಸ್ಮಿಕವಾಗಿ ಕನ್ನಬಾಡಿ ಗ್ರಾಮದ ಕೆರೆಗೆ ಇಳಿದಿದೆ. ಕೆರೆಯ ಆಳ ಹಾಗೂ ಕೆಸರಿನ ಕಾರಣದಿಂದಾಗಿ ಅಥವಾ ಹಿಂಡಿನಿಂದ ಬೇರ್ಪಟ್ಟ ಆತಂಕದಿಂದಾಗಿ ಆನೆ ಮರಿಯು ಕಳೆದ ಎರಡು ದಿನಗಳಿಂದ ಕೆರೆಯಿಂದ ಹೊರಬರಲಾಗದೆ ನೀರಿನಲ್ಲೇ ಕಾಲ ಕಳೆಯುತ್ತಿದೆ.
ಕಾಡಾನೆಗಳ ಹಿಂಡು ಸದ್ಯ ಈ ಭಾಗದ ಆಸುಪಾಸಿನಲ್ಲೇ ಇರಬಹುದು ಎಂದು ಶಂಕಿಸಲಾಗಿದ್ದು, ಮರಿಯು ಭಯದಿಂದ ಕೆರೆಯ ಮಧ್ಯದಲ್ಲೇ ಆಶ್ರಯ ಪಡೆದಿದೆ ಎನ್ನಲಾಗಿದೆ. ದಿನವಿಡೀ ನೀರಿನಲ್ಲೇ ಇರುವುದರಿಂದ ಆನೆ ಮರಿಯ ಆರೋಗ್ಯದ ಬಗ್ಗೆಯೂ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು