ಇತ್ತೀಚಿನ ಸುದ್ದಿ
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ
08/04/2026, 20:37
ಮೈಸೂರು(reporterkarnataka.com): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕ್ಕರಂಗಶೆಟ್ಟಿ ದೊಡ್ಡಿ ಹೊರ ವಲಯದ ಹಾವಿನ ಮೂಲೆಯಲ್ಲಿ ಕಾಡಗಿಚ್ಚು ಹಬ್ಬಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಾವಿನ ಮೂಲೆಯಲ್ಲಿ ಈ ಒಂದು ಅಗ್ನಿಅವಘಡ ಸಂಭವಿಸಿದೆ. ಸುಮಾರು 50ರಿಂದ 60 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ನಿಯಂತ್ರಣಕ್ಕೆ ಸಿಗದೆ ಬೆಂಕಿಯ ಕೆನ್ನಾಲಿಗೆ ಕ್ಷಣ ಕ್ಷಣಕ್ಕು ಅರಣ್ಯಕ್ಕೆ ವ್ಯಾಪಿಸುತ್ತಿದೆ.












