10:44 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಹಿಳೆಯರು ಮತ್ತು ಯುವಕರು ದೇಶದ ಸಂಸ್ಕೃತಿಯನ್ನು ಉಳಿಸುವ ಶಕ್ತಿಯಾಗಿದ್ದಾರೆ: ಒಡಿಯೂರು ಶ್ರೀ

09/04/2025, 22:51

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಮಹಿಳೆಯರು ಮತ್ತು ಯುವಕರು ದೇಶವನ್ನು ಮತ್ತು ಸಂಸ್ಕೃತಿಯನ್ನು ಉಳಿಸುವ ಶಕ್ತಿಯಾಗಿದ್ದಾರೆ. ರಕ್ತೇಶ್ವರೀ ದೇವಿಯು ವಿದ್ಯೆ, ಬುದ್ದಿ ರಕ್ಷಣೆಯನ್ನು ಕೊಡುವ ದೇವತೆಯಾಗಿದ್ದಾಳೆ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಬಿ.ಸಿ.ರೊಡಿನ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಮುನ್ನಾದಿನ ನಡೆದ ಧಾರ್ಮಿಕ ಸಭೆಯಲ್ಲಿ ಆರ್ಶೀವಚನ ನೀಡಿದರು.

ಯೌವನ ಮತ್ತು ಸಂಪತ್ತು ಸ್ಥಿರವಲ್ಲ. ಇಚ್ಛಾಶಕ್ತಿ ,ಜ್ಞಾನ ಶಕ್ತಿ , ಕ್ರಿಯಾ ಶಕ್ತಿ ಜಾಗೃತವಾಗಬೇಕಾದರೆ ಧರ್ಮ, ಸಂಸ್ಕೃತಿಯಿಂದ ಬದುಕಬೇಕು ಎಂದು ಆಶೀರ್ವಚನ ನೀಡಿದರು.
ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎರ್ಮಾಳ್ ಕಲ್ಪನಾ ಚಂದ್ರಶೇಖರ್ ಮಾತನಾಡಿದರು.
ಸೇವಾ ಸಮಿತಿಯ ಸದಸ್ಯ ಎಂ. ಅಶ್ವನಿ ಕುಮಾರ್ ರೈ ಸಾಗತಿಸಿ ಪ್ರಸ್ತಾವನೆ ಗೈದರು. ಉಪಾಧ್ಯಕ್ಷ ಸಂಜೀವ ಪೂಜಾರಿ, ಕೋಶಾಧಿಕಾರಿ ಬಿ. ಮೋಹನ್, ಬ್ರಹ್ಮ ಕಲಶೋತ್ಸವ ಸಮಿತಿಯ ಕೋಶಾಧಿಕಾರಿ ಕೆ. ನಾರಾಯಣ ಹೆಗ್ಡೆ, ಸಹಕೋಶಾಧಿಕಾರಿ ಕೆ. ವಸಂತ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ರಘುಪತಿ ಭಟ್ ಹಾಗೂ ಜೀರ್ಣೋದ್ಧಾರ ಮತ್ತು ಬ್ರಹ್ಮ ಕಲಶೋತ್ಸವ ಕಾರ್ಯದಲ್ಲಿ ತೊಡಗಿಸಿಕೊಂಡ ಪ್ರಮುಖರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಕಾರ್ಯದರ್ಶಿ ಐತ್ತಪ್ಪ ಪೂಜಾರಿ ವಂದಿಸಿದರು. ಎಚ್. ಕೆ. ನಯನಾಡು ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪುತ್ತೂರು
ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ವಿದುಷಿ ರೋಹಿಣಿ ಉದಯ್ ಶಿಷ್ಯೆಯರಿಂದ ನೃತ್ಯ ರಂಜಿನಿ, ಕಲ್ಲಡ್ಕ ಕಲಾನಿಕೇತನ ಡ್ಯಾನ್ಸ್ ಪೌಂಡೇಶನ್ ನ ವಿದುಷಿ ವಿದ್ಯಾಮನೋಜ್ ಅವರ ಶಿಷ್ಯರಿಂದ ನೃತ್ಯ ಸಿಂಚನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು