5:13 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

16/03/2025, 12:02

ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ್ಸ್ ಮ್ಯಾನೆಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ವಹಣೆ ಮಾಡುತ್ತಿದ್ದು ಈ ನಾಲ್ಕು ಘಟಕಗಳ ಮೂಲಕ ಉಭಯ ಜಿಲ್ಲೆಯ 220ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಿಗೆ ಸೇವೆಯನ್ನು ನೀಡುತ್ತಿದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಾಗಾರ “ಬ್ಲಾಸಮ್ – ಮಹಿಳಾ ಆರೋಗ್ಯ ಮತ್ತು ಸಬಲೀಕರಣ ಮತ್ತು ಸ್ಥಿರತೆಯ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ, ಪರಿಸರ ಸ್ನೇಹಿಯಾಗಿ ಋತುಚಕ್ರ ನಿರ್ವಹಣೆ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಪರಿಸರ ಸ್ನೇಹಿ ಮೆನ್ಸುಟ್ರುವಲ್ ಕಪ್ ಬಳಕೆಯ ಬಗ್ಗೆ ತರಬೇತಿಯನ್ನು ನಿಟ್ಟೆ ಯುನಿವರ್ಸಿಟಿಯ ಪ್ರಾಧ್ಯಾಪಕಿ ಡಾ.ಪ್ರಿಯಾ ಡಿ ಆಳ್ವಾ ಮತ್ತು ಶಿಲ್ಪಾ ಶಾಸ್ತ್ರಿಯವರು ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಉಚಿತ menstrual cups ವಿತರಿಸಲಾಗಿದ್ದು. ಮಹಿಳೆಯರ ಆರೋಗ್ಯ ಮತ್ತು ಪರಿಸರ ಸ್ನೇಹಿತ ಜೀವನ ಶೈಲಿಗೆ ಪೂರಕವಾಗಿದೆ. ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್ ಸಹಕರ ನೀಡಿದ್ದರು ಮತ್ತು ಕಾರ್ಯಕ್ರಮವನ್ನು rePurpose Global ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಪ್ರಜ್ವಲ್ ಶೆಣೈ ಕಾರ್ಯಕ್ರಮ ಸಂಯೋಜಿಸಿದರು ಮತ್ತು ಧನುಷ್ M.S , ವಿಜೇಶ್ ದೇವಾಡಿಗ, ನಿಧಿಕೃಷ್ಣ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು