3:39 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

16/03/2025, 12:02

ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ್ಸ್ ಮ್ಯಾನೆಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ವಹಣೆ ಮಾಡುತ್ತಿದ್ದು ಈ ನಾಲ್ಕು ಘಟಕಗಳ ಮೂಲಕ ಉಭಯ ಜಿಲ್ಲೆಯ 220ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಿಗೆ ಸೇವೆಯನ್ನು ನೀಡುತ್ತಿದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಾಗಾರ “ಬ್ಲಾಸಮ್ – ಮಹಿಳಾ ಆರೋಗ್ಯ ಮತ್ತು ಸಬಲೀಕರಣ ಮತ್ತು ಸ್ಥಿರತೆಯ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ, ಪರಿಸರ ಸ್ನೇಹಿಯಾಗಿ ಋತುಚಕ್ರ ನಿರ್ವಹಣೆ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಪರಿಸರ ಸ್ನೇಹಿ ಮೆನ್ಸುಟ್ರುವಲ್ ಕಪ್ ಬಳಕೆಯ ಬಗ್ಗೆ ತರಬೇತಿಯನ್ನು ನಿಟ್ಟೆ ಯುನಿವರ್ಸಿಟಿಯ ಪ್ರಾಧ್ಯಾಪಕಿ ಡಾ.ಪ್ರಿಯಾ ಡಿ ಆಳ್ವಾ ಮತ್ತು ಶಿಲ್ಪಾ ಶಾಸ್ತ್ರಿಯವರು ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಉಚಿತ menstrual cups ವಿತರಿಸಲಾಗಿದ್ದು. ಮಹಿಳೆಯರ ಆರೋಗ್ಯ ಮತ್ತು ಪರಿಸರ ಸ್ನೇಹಿತ ಜೀವನ ಶೈಲಿಗೆ ಪೂರಕವಾಗಿದೆ. ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್ ಸಹಕರ ನೀಡಿದ್ದರು ಮತ್ತು ಕಾರ್ಯಕ್ರಮವನ್ನು rePurpose Global ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಪ್ರಜ್ವಲ್ ಶೆಣೈ ಕಾರ್ಯಕ್ರಮ ಸಂಯೋಜಿಸಿದರು ಮತ್ತು ಧನುಷ್ M.S , ವಿಜೇಶ್ ದೇವಾಡಿಗ, ನಿಧಿಕೃಷ್ಣ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು