5:25 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

16/03/2025, 12:02

ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ್ಸ್ ಮ್ಯಾನೆಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ವಹಣೆ ಮಾಡುತ್ತಿದ್ದು ಈ ನಾಲ್ಕು ಘಟಕಗಳ ಮೂಲಕ ಉಭಯ ಜಿಲ್ಲೆಯ 220ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಿಗೆ ಸೇವೆಯನ್ನು ನೀಡುತ್ತಿದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಾಗಾರ “ಬ್ಲಾಸಮ್ – ಮಹಿಳಾ ಆರೋಗ್ಯ ಮತ್ತು ಸಬಲೀಕರಣ ಮತ್ತು ಸ್ಥಿರತೆಯ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ, ಪರಿಸರ ಸ್ನೇಹಿಯಾಗಿ ಋತುಚಕ್ರ ನಿರ್ವಹಣೆ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಪರಿಸರ ಸ್ನೇಹಿ ಮೆನ್ಸುಟ್ರುವಲ್ ಕಪ್ ಬಳಕೆಯ ಬಗ್ಗೆ ತರಬೇತಿಯನ್ನು ನಿಟ್ಟೆ ಯುನಿವರ್ಸಿಟಿಯ ಪ್ರಾಧ್ಯಾಪಕಿ ಡಾ.ಪ್ರಿಯಾ ಡಿ ಆಳ್ವಾ ಮತ್ತು ಶಿಲ್ಪಾ ಶಾಸ್ತ್ರಿಯವರು ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಉಚಿತ menstrual cups ವಿತರಿಸಲಾಗಿದ್ದು. ಮಹಿಳೆಯರ ಆರೋಗ್ಯ ಮತ್ತು ಪರಿಸರ ಸ್ನೇಹಿತ ಜೀವನ ಶೈಲಿಗೆ ಪೂರಕವಾಗಿದೆ. ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್ ಸಹಕರ ನೀಡಿದ್ದರು ಮತ್ತು ಕಾರ್ಯಕ್ರಮವನ್ನು rePurpose Global ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಪ್ರಜ್ವಲ್ ಶೆಣೈ ಕಾರ್ಯಕ್ರಮ ಸಂಯೋಜಿಸಿದರು ಮತ್ತು ಧನುಷ್ M.S , ವಿಜೇಶ್ ದೇವಾಡಿಗ, ನಿಧಿಕೃಷ್ಣ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು