9:07 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

16/03/2025, 12:02

ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ್ಸ್ ಮ್ಯಾನೆಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ವಹಣೆ ಮಾಡುತ್ತಿದ್ದು ಈ ನಾಲ್ಕು ಘಟಕಗಳ ಮೂಲಕ ಉಭಯ ಜಿಲ್ಲೆಯ 220ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಿಗೆ ಸೇವೆಯನ್ನು ನೀಡುತ್ತಿದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಾಗಾರ “ಬ್ಲಾಸಮ್ – ಮಹಿಳಾ ಆರೋಗ್ಯ ಮತ್ತು ಸಬಲೀಕರಣ ಮತ್ತು ಸ್ಥಿರತೆಯ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ, ಪರಿಸರ ಸ್ನೇಹಿಯಾಗಿ ಋತುಚಕ್ರ ನಿರ್ವಹಣೆ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಪರಿಸರ ಸ್ನೇಹಿ ಮೆನ್ಸುಟ್ರುವಲ್ ಕಪ್ ಬಳಕೆಯ ಬಗ್ಗೆ ತರಬೇತಿಯನ್ನು ನಿಟ್ಟೆ ಯುನಿವರ್ಸಿಟಿಯ ಪ್ರಾಧ್ಯಾಪಕಿ ಡಾ.ಪ್ರಿಯಾ ಡಿ ಆಳ್ವಾ ಮತ್ತು ಶಿಲ್ಪಾ ಶಾಸ್ತ್ರಿಯವರು ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಉಚಿತ menstrual cups ವಿತರಿಸಲಾಗಿದ್ದು. ಮಹಿಳೆಯರ ಆರೋಗ್ಯ ಮತ್ತು ಪರಿಸರ ಸ್ನೇಹಿತ ಜೀವನ ಶೈಲಿಗೆ ಪೂರಕವಾಗಿದೆ. ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್ ಸಹಕರ ನೀಡಿದ್ದರು ಮತ್ತು ಕಾರ್ಯಕ್ರಮವನ್ನು rePurpose Global ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಪ್ರಜ್ವಲ್ ಶೆಣೈ ಕಾರ್ಯಕ್ರಮ ಸಂಯೋಜಿಸಿದರು ಮತ್ತು ಧನುಷ್ M.S , ವಿಜೇಶ್ ದೇವಾಡಿಗ, ನಿಧಿಕೃಷ್ಣ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು