6:00 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

16/03/2025, 12:02

ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ್ಸ್ ಮ್ಯಾನೆಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ವಹಣೆ ಮಾಡುತ್ತಿದ್ದು ಈ ನಾಲ್ಕು ಘಟಕಗಳ ಮೂಲಕ ಉಭಯ ಜಿಲ್ಲೆಯ 220ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಿಗೆ ಸೇವೆಯನ್ನು ನೀಡುತ್ತಿದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಾಗಾರ “ಬ್ಲಾಸಮ್ – ಮಹಿಳಾ ಆರೋಗ್ಯ ಮತ್ತು ಸಬಲೀಕರಣ ಮತ್ತು ಸ್ಥಿರತೆಯ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ, ಪರಿಸರ ಸ್ನೇಹಿಯಾಗಿ ಋತುಚಕ್ರ ನಿರ್ವಹಣೆ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಪರಿಸರ ಸ್ನೇಹಿ ಮೆನ್ಸುಟ್ರುವಲ್ ಕಪ್ ಬಳಕೆಯ ಬಗ್ಗೆ ತರಬೇತಿಯನ್ನು ನಿಟ್ಟೆ ಯುನಿವರ್ಸಿಟಿಯ ಪ್ರಾಧ್ಯಾಪಕಿ ಡಾ.ಪ್ರಿಯಾ ಡಿ ಆಳ್ವಾ ಮತ್ತು ಶಿಲ್ಪಾ ಶಾಸ್ತ್ರಿಯವರು ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಉಚಿತ menstrual cups ವಿತರಿಸಲಾಗಿದ್ದು. ಮಹಿಳೆಯರ ಆರೋಗ್ಯ ಮತ್ತು ಪರಿಸರ ಸ್ನೇಹಿತ ಜೀವನ ಶೈಲಿಗೆ ಪೂರಕವಾಗಿದೆ. ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್ ಸಹಕರ ನೀಡಿದ್ದರು ಮತ್ತು ಕಾರ್ಯಕ್ರಮವನ್ನು rePurpose Global ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಪ್ರಜ್ವಲ್ ಶೆಣೈ ಕಾರ್ಯಕ್ರಮ ಸಂಯೋಜಿಸಿದರು ಮತ್ತು ಧನುಷ್ M.S , ವಿಜೇಶ್ ದೇವಾಡಿಗ, ನಿಧಿಕೃಷ್ಣ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು