5:27 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

16/03/2025, 12:02

ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ್ಸ್ ಮ್ಯಾನೆಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ವಹಣೆ ಮಾಡುತ್ತಿದ್ದು ಈ ನಾಲ್ಕು ಘಟಕಗಳ ಮೂಲಕ ಉಭಯ ಜಿಲ್ಲೆಯ 220ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಿಗೆ ಸೇವೆಯನ್ನು ನೀಡುತ್ತಿದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಾಗಾರ “ಬ್ಲಾಸಮ್ – ಮಹಿಳಾ ಆರೋಗ್ಯ ಮತ್ತು ಸಬಲೀಕರಣ ಮತ್ತು ಸ್ಥಿರತೆಯ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ, ಪರಿಸರ ಸ್ನೇಹಿಯಾಗಿ ಋತುಚಕ್ರ ನಿರ್ವಹಣೆ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಪರಿಸರ ಸ್ನೇಹಿ ಮೆನ್ಸುಟ್ರುವಲ್ ಕಪ್ ಬಳಕೆಯ ಬಗ್ಗೆ ತರಬೇತಿಯನ್ನು ನಿಟ್ಟೆ ಯುನಿವರ್ಸಿಟಿಯ ಪ್ರಾಧ್ಯಾಪಕಿ ಡಾ.ಪ್ರಿಯಾ ಡಿ ಆಳ್ವಾ ಮತ್ತು ಶಿಲ್ಪಾ ಶಾಸ್ತ್ರಿಯವರು ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಉಚಿತ menstrual cups ವಿತರಿಸಲಾಗಿದ್ದು. ಮಹಿಳೆಯರ ಆರೋಗ್ಯ ಮತ್ತು ಪರಿಸರ ಸ್ನೇಹಿತ ಜೀವನ ಶೈಲಿಗೆ ಪೂರಕವಾಗಿದೆ. ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್ ಸಹಕರ ನೀಡಿದ್ದರು ಮತ್ತು ಕಾರ್ಯಕ್ರಮವನ್ನು rePurpose Global ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಪ್ರಜ್ವಲ್ ಶೆಣೈ ಕಾರ್ಯಕ್ರಮ ಸಂಯೋಜಿಸಿದರು ಮತ್ತು ಧನುಷ್ M.S , ವಿಜೇಶ್ ದೇವಾಡಿಗ, ನಿಧಿಕೃಷ್ಣ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು