1:46 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ

16/03/2025, 12:02

ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ್ಸ್ ಮ್ಯಾನೆಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ನಿರ್ವಹಣೆ ಮಾಡುತ್ತಿದ್ದು ಈ ನಾಲ್ಕು ಘಟಕಗಳ ಮೂಲಕ ಉಭಯ ಜಿಲ್ಲೆಯ 220ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಿಗೆ ಸೇವೆಯನ್ನು ನೀಡುತ್ತಿದೆ. ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಾಗಾರ “ಬ್ಲಾಸಮ್ – ಮಹಿಳಾ ಆರೋಗ್ಯ ಮತ್ತು ಸಬಲೀಕರಣ ಮತ್ತು ಸ್ಥಿರತೆಯ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ, ಪರಿಸರ ಸ್ನೇಹಿಯಾಗಿ ಋತುಚಕ್ರ ನಿರ್ವಹಣೆ ಮತ್ತು ಶುಚಿತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಪರಿಸರ ಸ್ನೇಹಿ ಮೆನ್ಸುಟ್ರುವಲ್ ಕಪ್ ಬಳಕೆಯ ಬಗ್ಗೆ ತರಬೇತಿಯನ್ನು ನಿಟ್ಟೆ ಯುನಿವರ್ಸಿಟಿಯ ಪ್ರಾಧ್ಯಾಪಕಿ ಡಾ.ಪ್ರಿಯಾ ಡಿ ಆಳ್ವಾ ಮತ್ತು ಶಿಲ್ಪಾ ಶಾಸ್ತ್ರಿಯವರು ನೀಡಿದರು.

ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಉಚಿತ menstrual cups ವಿತರಿಸಲಾಗಿದ್ದು. ಮಹಿಳೆಯರ ಆರೋಗ್ಯ ಮತ್ತು ಪರಿಸರ ಸ್ನೇಹಿತ ಜೀವನ ಶೈಲಿಗೆ ಪೂರಕವಾಗಿದೆ. ಕಾರ್ಯಕ್ರಮಕ್ಕೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್ ಸಹಕರ ನೀಡಿದ್ದರು ಮತ್ತು ಕಾರ್ಯಕ್ರಮವನ್ನು rePurpose Global ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ವ್ಯವಸ್ಥಾಪಕ ಪ್ರಜ್ವಲ್ ಶೆಣೈ ಕಾರ್ಯಕ್ರಮ ಸಂಯೋಜಿಸಿದರು ಮತ್ತು ಧನುಷ್ M.S , ವಿಜೇಶ್ ದೇವಾಡಿಗ, ನಿಧಿಕೃಷ್ಣ ಕಾರ್ಯಕ್ರಮ ಸಂಘಟಿಸಲು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು