12:36 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಹಿಳೆಯರೇ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಪಲ್ಟಿ: 6ಕ್ಕೂ ಹೆಚ್ಚು ಮಂದಿಗೆ ಗಾಯ; ಕೊಲ್ಲೂರಿನಿಂದ ವಾಪಸಾಗುತ್ತಿದ್ದಾಗ ದುರ್ಘಟನೆ

16/11/2024, 11:15

ಹೊಸನಗರ(reporterkarnataka.com): ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಚಿಕ್ಕಪೇಟೆ ಸರ್ಕಲ್ ಸಮೀಪದ ಶ್ರೀಧರಪುರ ಬಳಿ ಕೊಲ್ಲೂರಿನಿಂದ ವಾಪಸಾಗುತ್ತಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯೊಡೆದ ಪರಿಣಾಮ 6 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ.
ಡಜನಿಗೂ ಹೆಚ್ಚು ಮಹಿಳೆಯರೇ ತುಂಬಿದ್ದ ಟಿಟಿ ವಾಹನ ಕೊಲ್ಲೂರು ಹೆದ್ದಾರಿಯಲ್ಲಿ‌ ಶುಕ್ರವಾರ ರಾತ್ರಿ11 ರ ವೇಳೆಗೆಅಪಘಾತಕ್ಕೀಡಾಗಿತ್ತು.
ಅಪಘಾತದಲ್ಲಿ ಸರಸ್ವತಿ, ಸರೋಜಾ,ಕಮಲಾ, ಜ್ಯೋತಿ, ಗೌರಮ್ಮ, ಶಾರದಾ ಸೇರಿದಂತೆ 6ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ. ಹೊಸನಗರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ ಬಳಿಕ ಮೂರು ಮಹಿಳೆಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರೆಲ್ಲ ಶಿಕಾರಿಪುರ ತಾಲೂಕಿನ ಬಿ ಅಣ್ಣಾಪುರ ಗ್ರಾಮದವರಾಗಿದ್ದಾರೆ.
ಕೊಲ್ಲೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಟಿಟಿ ವಾಹನ ರಸ್ತೆ‌ ಮೇಲೆ ಪಲ್ಟಿ ಹೊಡೆದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು