5:47 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ ಚಾಲನೆ

04/08/2025, 19:25

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ದೊರೆತಿದೆ.
ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಈ ಮೂಲಕ ನಾಡಹಬ್ಬ ದಸರಾಗೆ ಮುನ್ನುಡಿ ಬರೆಯಲಾಯಿತು.
*ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳ ಮೊದಲ ತಂಡ:* ಈ ಬಾರಿ ನಾಡಹಬ್ಬ ದಸರಾ ಮಹೋತ್ಸವವನ್ನು ಸರ್ಕಾರ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಎರಡು ತಿಂಗಳ ಮೊದಲೇ ಜಂಬೂ ಸವಾರಿಯಲ್ಲಿ ಭಾಗವಹಿಸುವ 14 ಆನೆಗಳ ಪೈಕಿ ಅಭಿಮನ್ಯು ನೇತೃತ್ವದ 9 ಆನೆಗಳ ಮೊದಲ ತಂಡ ಮೈಸೂರಿಗೆ ತೆರಳಿವೆ.
*ಗಜ ಪಯಣಕ್ಕೆ ಚಾಲನೆ;ಸಚಿವ ಮಹದೇವಪ್ಪ ಗೈರು:* ಗಜಪಯಣ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಸಚಿವ ವೆಂಕಟೇಶ್ ಹಾಗೂ ಅರಣ್ಯಾಧಿಕಾರಿಗಳು ಸೇರಿದಂತೆ ಆನೆಗಳ ಮಾವುತರು ಹಾಗೂ ಕಾವಾಡಿಗಳು ಇದ್ದರು. ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಗಜಪಯಣ ಕಾರ್ಯಕ್ರಮಕ್ಕೆ ಗೈರಾಗಿದ್ದರು.
*ಸಾಂಪ್ರದಾಯಿಕ ಪೂಜೆ:* ಗಜಪಯಣಕ್ಕೂ ಮುನ್ನ ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ 9 ಆನೆಗಳಿಗೆ ಸಾಂಪ್ರದಾಯಿಕವಾಗಿ ಪಾದ ತೊಳೆದು ಅರಿಶಿನ ಕುಂಕುಮ ಹಚ್ಚಿ, ಶೃಂಗಾರ ಮಾಡಿ ವಿವಿಧ ಬಗೆಯ ಸಿಹಿತಿಂಡಿಗಳನ್ನು ಇಟ್ಟು ಗಜಪಡೆಗೆ ಮಹಾ ಮಂಗಳಾರತಿ ಮಾಡಿದ ನಂತರ ಕಾಡಿನ ದೇವತೆಗೆ ಪೂಜೆ, ಗಣಪತಿ ಪೂಜೆ, ಚಾಮುಂಡೇಶ್ವರಿ ಪೂಜೆ ಮಾಡಿದ ಬಳಿಕ 12:34 ರಿಂದ 12:59ರ ಶುಭ ತುಲಾ ಲಗ್ನದಲ್ಲಿ ಗಣ್ಯರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ ಸಿಕ್ಕಿತು.
ಪೂಜೆಯ ನಂತರ ಗಜಪಡೆಗೆ ಕಬ್ಬು, ಬೆಲ್ಲ, ಬಾಳೆಹಣ್ಣು, ಕಾಯಿ ಹಾಗೂ ಇತರ ಹಣ್ಣುಹಂಪಲುಗಳನ್ನು ನೀಡಲಾಯಿತು. ಗಜಪಡೆಗೆ ಅರ್ಚಕರು ದೃಷ್ಟಿ ತೆಗೆದರು. ಈ ಗಜ ಪಯಣ ಕಾರ್ಯಕ್ರಮದಲ್ಲಿ ವಿವಿಧ ಜಾನಪದ ತಂಡಗಳು, ವೀರಗಾಸೆ, ಬುಡಕಟ್ಟು ಜಾನಪದ ಕಲೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನೆರವೇರಿದವು.
*ಗಜಪಡೆಯ ವಿವರ:* ಗಜಪಡೆ ನಾಯಕ ಅಭಿಮನ್ಯು(59), ಮತ್ತಿಗೋಡು ಶಿಬಿರದ ಭೀಮ(25), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಸೇರಿದಂತೆ 7 ಗಂಡಾನೆ ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ (ದೊಡ್ಡಹರವೆ) ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ತಂಡ ಮೈಸೂರಿಗೆ ತೆರಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು