5:23 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

11/08/2025, 20:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು.
ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ ಆನೆಯಾಗಿದ್ದು, ಆನಂತರ ಜಂಬೂ ಸವಾರಿ ಕ್ಯಾಪ್ಟನ್ ಅಭಿಮನ್ಯು 2ನೇ ಸ್ಥಾನದಲ್ಲಿದೆ.
ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಹುಣಸೂರಿನ ವೀರನ ಹೊಸಹಳ್ಳಿ ಮೂಲಕ ಆಗಮಿಸಿರುವ ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ ನಡೆಸಲಾಯಿತು.
*9 ಆನೆಗಳ ತೂಕದ ವಿವರ:* ಅಭಿಮನ್ಯು – 5,360 ಕೆ.ಜಿ., ಧನಂಜಯ – 5,310 ಕೆ.ಜಿ., ಕಾವೇರಿ – 3,010 ಕೆ.ಜಿ., ಲಕ್ಷ್ಮಿ – 3,730 ಕೆ.ಜಿ., ಭೀಮ – 5,465 ಕೆ.ಜಿ., ಏಕಲವ್ಯ – 5,305 ಕೆ.ಜಿ., ಮಹೇಂದ್ರ – 5,120 ಕೆ.ಜಿ., ಕಂಜನ್ – 4,880 ಕೆ.ಜಿ., ಪ್ರಶಾಂತ – 5,110 ಕೆ.ಜಿ. ತೂಕ ಹೊಂದಿದ್ದಾರೆ.
“ಈ ಬಾರಿ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ 9 ಆನೆಗಳ ತೂಕ ಪರೀಕ್ಷೆ ಮಾಡಲಾಗಿದ್ದು, ಎಲ್ಲ ಆನೆಗಳು ಆರೋಗ್ಯವಾಗಿವೆ. ಕಳೆದ ಬಾರಿ ದಸರಾದಲ್ಲಿ ಭಾಗವಹಿಸಿ ವಾಪಸ್ ಕಾಡಿಗೆ ಹೋಗುವಾಗ ಇದ್ದ ತೂಕವನ್ನೇ ಉಳಿಸಿಕೊಂಡಿರುವ ಆನೆಗಳು ಎಲ್ಲವೂ ಆರೋಗ್ಯವಾಗಿದೆ,
ಆನೆಗಳ ಆರೋಗ್ಯ ಹಾಗೂ ಜಂಬೂಸವಾರಿ ಮೆರವಣಿಗೆಗೆ ಯಾವ ರೀತಿ ಪ್ರೋಟೀನ್​ಗಳು, ವಿಶೇಷ ಆಹಾರ ನೀಡಬೇಕು ಎಂಬುದನ್ನು ತಿಳಿಯಲು ಇಂದು ತೂಕ ಪರೀಕ್ಷೆ ಮಾಡಲಾಯಿತು. ಅರಣ್ಯಭವನದಲ್ಲಿ ವೈದ್ಯರ ಮೀಟಿಂಗ್ ಮಾಡಿ ಅಂತಿಮವಾಗಿ ಯಾವ ರೀತಿ ಆಹಾರ ನೀಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುತ್ತದೆ. ಅದರಂತೆ ನಾಳೆಯಿಂದ ವಿಶೇಷ ಆಹಾರ ಜೊತೆಗೆ ತಾಲೀಮು ನಡೆಸಲಾಗುವುದು ಎಂದು ಡಿಸಿ ಎಫ್ ಪ್ರಭುಗೌಡ ತಿಳಿಸಿದ್ದಾರೆ.
ಗಜಪಡೆ ಅರಮನೆಯಲ್ಲಿ ವಾಸ್ತವ್ಯ ಹೂಡಲಿದೆ. 9 ಆನೆಗಳು ಅರಮನೆಯ ಮುಂಭಾಗದ ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ವಾಸ್ತವ್ಯ ಹೂಡಿವೆ.
ಎರಡು ತಿಂಗಳುಗಳ ಕಾಲ ಇಲ್ಲೇ ಇರುವ ಗಜಪಡೆ ಜಂಬೂಸವಾರಿ ಮೆರವಣಿಗೆ ಮುಗಿಸಿಕೊಂಡು ಕಾಡಿಗೆ ಮರಳುತ್ತವೆ. ಈ ಮಧ್ಯೆ ಗಜಪಡೆಯನ್ನು ನಿತ್ಯ ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ತಾಲೀಮು ನಡೆಸಲಾಗುತ್ತದೆ. ಜೊತೆ ಗಜಪಡೆಗೆ ವಿಶೇಷ ಆಹಾರ ನೀಡಲಾಗುತ್ತದೆ. ಈ ಬಾರಿಯೂ ಸಹ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು