2:08 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

11/08/2025, 20:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು.
ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ ಆನೆಯಾಗಿದ್ದು, ಆನಂತರ ಜಂಬೂ ಸವಾರಿ ಕ್ಯಾಪ್ಟನ್ ಅಭಿಮನ್ಯು 2ನೇ ಸ್ಥಾನದಲ್ಲಿದೆ.
ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಹುಣಸೂರಿನ ವೀರನ ಹೊಸಹಳ್ಳಿ ಮೂಲಕ ಆಗಮಿಸಿರುವ ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ ನಡೆಸಲಾಯಿತು.
*9 ಆನೆಗಳ ತೂಕದ ವಿವರ:* ಅಭಿಮನ್ಯು – 5,360 ಕೆ.ಜಿ., ಧನಂಜಯ – 5,310 ಕೆ.ಜಿ., ಕಾವೇರಿ – 3,010 ಕೆ.ಜಿ., ಲಕ್ಷ್ಮಿ – 3,730 ಕೆ.ಜಿ., ಭೀಮ – 5,465 ಕೆ.ಜಿ., ಏಕಲವ್ಯ – 5,305 ಕೆ.ಜಿ., ಮಹೇಂದ್ರ – 5,120 ಕೆ.ಜಿ., ಕಂಜನ್ – 4,880 ಕೆ.ಜಿ., ಪ್ರಶಾಂತ – 5,110 ಕೆ.ಜಿ. ತೂಕ ಹೊಂದಿದ್ದಾರೆ.
“ಈ ಬಾರಿ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ 9 ಆನೆಗಳ ತೂಕ ಪರೀಕ್ಷೆ ಮಾಡಲಾಗಿದ್ದು, ಎಲ್ಲ ಆನೆಗಳು ಆರೋಗ್ಯವಾಗಿವೆ. ಕಳೆದ ಬಾರಿ ದಸರಾದಲ್ಲಿ ಭಾಗವಹಿಸಿ ವಾಪಸ್ ಕಾಡಿಗೆ ಹೋಗುವಾಗ ಇದ್ದ ತೂಕವನ್ನೇ ಉಳಿಸಿಕೊಂಡಿರುವ ಆನೆಗಳು ಎಲ್ಲವೂ ಆರೋಗ್ಯವಾಗಿದೆ,
ಆನೆಗಳ ಆರೋಗ್ಯ ಹಾಗೂ ಜಂಬೂಸವಾರಿ ಮೆರವಣಿಗೆಗೆ ಯಾವ ರೀತಿ ಪ್ರೋಟೀನ್​ಗಳು, ವಿಶೇಷ ಆಹಾರ ನೀಡಬೇಕು ಎಂಬುದನ್ನು ತಿಳಿಯಲು ಇಂದು ತೂಕ ಪರೀಕ್ಷೆ ಮಾಡಲಾಯಿತು. ಅರಣ್ಯಭವನದಲ್ಲಿ ವೈದ್ಯರ ಮೀಟಿಂಗ್ ಮಾಡಿ ಅಂತಿಮವಾಗಿ ಯಾವ ರೀತಿ ಆಹಾರ ನೀಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುತ್ತದೆ. ಅದರಂತೆ ನಾಳೆಯಿಂದ ವಿಶೇಷ ಆಹಾರ ಜೊತೆಗೆ ತಾಲೀಮು ನಡೆಸಲಾಗುವುದು ಎಂದು ಡಿಸಿ ಎಫ್ ಪ್ರಭುಗೌಡ ತಿಳಿಸಿದ್ದಾರೆ.
ಗಜಪಡೆ ಅರಮನೆಯಲ್ಲಿ ವಾಸ್ತವ್ಯ ಹೂಡಲಿದೆ. 9 ಆನೆಗಳು ಅರಮನೆಯ ಮುಂಭಾಗದ ಕೋಡಿ ಸೋಮೇಶ್ವರ ದೇವಾಲಯದ ಆವರಣದಲ್ಲಿ ವಾಸ್ತವ್ಯ ಹೂಡಿವೆ.
ಎರಡು ತಿಂಗಳುಗಳ ಕಾಲ ಇಲ್ಲೇ ಇರುವ ಗಜಪಡೆ ಜಂಬೂಸವಾರಿ ಮೆರವಣಿಗೆ ಮುಗಿಸಿಕೊಂಡು ಕಾಡಿಗೆ ಮರಳುತ್ತವೆ. ಈ ಮಧ್ಯೆ ಗಜಪಡೆಯನ್ನು ನಿತ್ಯ ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ತಾಲೀಮು ನಡೆಸಲಾಗುತ್ತದೆ. ಜೊತೆ ಗಜಪಡೆಗೆ ವಿಶೇಷ ಆಹಾರ ನೀಡಲಾಗುತ್ತದೆ. ಈ ಬಾರಿಯೂ ಸಹ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು