ಇತ್ತೀಚಿನ ಸುದ್ದಿ
ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜ: ಸುವರ್ಣ ವಿಧಾನಸೌಧ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ
09/12/2025, 13:00
ಬೆಳಗಾವಿ (reporterkarnataka.com): ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣ ಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನ ಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಧ್ವಜವನ್ನು ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.












