5:34 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ಹಾಸನ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡಲು ಸಿಎಂಗೆ ಓಲೈಕೆ ರಾಜಕಾರಣ ಅಡ್ಡಿಯ ಚಿಂತೆ: ಬಸವರಾಜ ಬೊಮ್ಮಾಯಿ

15/09/2025, 19:22

ಬೆಂಗಳೂರು(reporterkarnataka.com): ಹಾಸನ ಗಣೇಶೋತ್ಸವ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡುವಲ್ಲಿಯೂ ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಹೆಚ್ಚಿನ ಪರಿಹಾರ ನೀಡಿದರೆ ಓಲೈಕೆ ರಾಜಕೀಯಕ್ಕೆ ಏನಾದರೂ ಧಕ್ಕೆಯಾಗುತ್ತದೆಯಾ ಎಂದು ಆಲೋಚನೆ ಮಾಡುತ್ತಿದ್ದಾರೆ. ಅವರಲ್ಲಿ ಮಾನವೀಯತೆ ಸತ್ತು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಆಂಗ್ಲ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಹಾಸನ ಗಣೇಶೋತ್ಸವ ಮೆರವಣಿಗೆಯಲ್ಲಿ ನಡೆದ ದುರಂತದಲ್ಲಿ ಜನರು ತಮ್ಮ ಕುಟುಂಬದವರ ಜೀವ ಕಳೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ದೊಡ್ಡ ಪ್ರಮಾಣದ ನಷ್ಟವುಂಟಾಗಿದೆ. ತಮ್ಮ ಕೂಟುಂಬದ ಆದಾಯ ತರುವ ವ್ಯಕ್ತಿಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಅವರು ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಅವರು ಭಿಕ್ಷೆ ಬೇಡುತ್ತಿಲ್ಲ. ಸರ್ಕಾರ ಮಾನವೀಯತೆಯ ಆಧಾರದಲ್ಲಿ ಅವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಕೋಮು ಗಲಭೆಯಲ್ಲಿ ಮೃತರಾದವರಿಗೆ, ಪ್ರಚೋದನೆಯಲ್ಲಿ ಸಾವಿಗೀಡಾದವರಿಗೆ, ವೈನಾಡಿನ ದುರಂತಕ್ಕೆ ಈಗ ಹಿಮಾಚಲ ಪ್ರದೇಶಕ್ಕೆ ಹಣ ನೀಡಿದ್ದಾರೆ. ಹಾಸನದಲ್ಲಿ ಗಣೇಶ ಮೆರವಣೆಗೆಯ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಈಗ ಹೆಚ್ಚಿನ ಪರಿಹಾರ ನೀಡಿದರೆ ತುಷ್ಡೀಕರಣದ ರಾಜಕೀಯಕ್ಕೆ ಏನಾದರೂ ಧಕ್ಕೆಯಾಗುತ್ತದೆಯಾ ಎಂದು ಆಲೋಚನೆ ಮಾಡುತ್ತಿದ್ದಾರೆ. ಮಾನವೀಯತೆ ಸತ್ತು ಹೋಗಿದೆ. ಅವರಲ್ಲಿ ನಿಜವಾಗಲೂ ಮಾನವೀಯತೆ‌ ಇದ್ದರೆ ಹೆಚ್ಚಿನ ಪರಿಹಾರ ನೀಡಿ ಎಲ್ಲ ಸಮುದಾಯದ ನಾಯಕನಾಗಲಿ ಎಂದು ಆಗ್ರಹಿಸಿದರು.

*ಜನರ ಭಾವನೆ ಗೌರವಿಸಬೇಕು:*
ದಸರಾ ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸಬೇಕಿತ್ತು. ಇದು ಜನರ ನಂಬಿಕೆ, ಸಂಪ್ರದಾಯ ಮತ್ತು ಭಾವನೆಗಳಿಗೆ ಸಂಬಂಧಿಸಿದ ವಿಷಯ. ಇದು ಕಾನೂನಿನ ವ್ಯಾಪ್ತಿಯಲ್ಲಿ ತೀರ್ಮಾನ ಮಾಡಲು ಆಗುವುದಿಲ್ಲ. ಇದು ರಾಜ್ಯ ಸರ್ಕಾರ ಮಾಡಬೇಕಿರುವ ತೀರ್ಮಾನ, ಬಾನು ಮುಷ್ತಾಕ ಅವರ ಆಯ್ಕೆ ಓಲೈಕೆ ರಾಜಕಾರಣದ ಒಂದು ಭಾಗ, ಬಾನು ಮುಷ್ತಾಕ ಅವರ ಬಗ್ಗೆ ನಮಗೆ ಗೌರವ ಇದೆ. ಆದರೆ, ದಸರಾ ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

*ಬಿಸಿಸಿಐ ಕ್ರಿಕೆಟ್ ಆಡಿಸಬಾರದಿತ್ತು:*
ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನ ತಂಡದ ಜೊತೆ ನಡೆದುಕೊಂಡ ರೀತಿಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೂರ್ಯಕುಮಾರ್ ಯಾದವ ನಾಯಕನಾಗಿ ಗ್ರೌಂಡ್ ಒಳಗೂ ಹಾಗೂ ಗ್ರೌಂಡ್ ಹೊರಗೂ ಉತ್ತಮವಾಗಿ ನಡೆದುಕೊಂಡಿದ್ದಾರೆ. ತಂಡದ ಗೆಲುವನ್ನು ಭಾರತೀಯ ಯೋಧರಿಗೆ ಅರ್ಪಿಸಿದ್ದಾರೆ. ಆದರೆ, ಪೆಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನ ಜೊತೆಗೆ ಕ್ರೀಡೆ ಸೇರಿದಂತೆ ಯಾವುದೇ ರೀತಿಯ ಸಂಬಂಧ ಇಟ್ಟುಕೊಳ್ಳಬಾರದಿತ್ತು. ಈ ನಿಟ್ಟಿನಲ್ಲಿ ಬಿಸಿಸಿಐ ಪಾಕಿಸ್ತಾನದ ಜೊತೆ ಆಡದಿರಲು ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಹೇಳಿದರು.

*ಪಾಟ್ ಹೋಲ್ ಡ್ರೈವ್:*
ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿ ಬಿದ್ದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನ ನಾಗರಿಕರು ಪಾಟ್ ಹೋಲ್ ಡ್ರೈವ್ ಅನುಭವ ಪಡೆಯುತ್ತಿದ್ದಾರೆ‌. ರಾಜ್ಯ ಸರ್ಕಾರ ಬೆಂಗಳೂರು ಅಭಿವೃದ್ಧಿ ಗೆ ಯಾವುದೇ ಹಣ ನೀಡುತ್ತಿಲ್ಲ. ಅತಿ ಹೆಚ್ಚು ತೆರಿಗೆ ನೀಡುತ್ತಿರುವುದು ಬೆಂಗಳೂರು. ಪ್ರತಿ ಮೂರು ತಿಂಗಳಿಗೆ ತೆರಿಗೆ ಹೆಚ್ಚಳ ಮಾಡುತ್ತಿದ್ದಾರೆ. ಜನರು ಗುಂಡಿಗಳ ಜೊತೆ ಬದುಕುವಂತಾಗಿದೆ. ಜನರು ಇದರ ವಿರುದ್ದ ದೊಡ್ಡ ಸಂಖ್ಯೆಯಲ್ಲಿ ಸರ್ಕಾರದ ವಿರುದ್ದ ಧ್ವನಿ ಎತ್ತಬೇಕು ಎಂದರು.
ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಗುಂಡಿಗಳಿವೆ. ರಾಜ್ಯ ಸರ್ಕಾರ ಬೆಂಗಳೂರಿಗೆ 1100 ಕೋಟಿ ರೂ. ನೀಡುವುದಾಗಿ ಹೇಳಿದೆ. ಅದು ಅತಿ ಸಣ್ಣ ಮೊತ್ತವಾಯಿತು. ನಾವು ಬೆಂಗಳೂರು ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ನೀಡಿದ್ದೇವು. ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿರುವ ಹಣ ಯಾವುದಕ್ಕೂ ಸಾಲುವುದಿಲ್ಲ. ಸಾಮಾಜಿಕ ಜಾಲ ತಾಣದಲ್ಲಿ ಜನರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕೇವಲ ಬ್ರ್ಯಾಂಡ್ ಬೆಂಗಳೂರು ಎಂದು ದೊಡ್ಡದಾಗಿ ಹೇಳುತ್ತಿದ್ದಾರೆ. ಬೆಂಗಳೂರಿನ ಜನ ಪ್ರತಿ ದಿನ ಗುಂಡಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ಈ ಸರ್ಕಾರ ಇರುವವರೆಗೂ ಜನರು ಗುಂಡಿಗಳ ಜೊತೆ ಇರುವ ಅನಿವಾರ್ಯತೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು