2:41 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

‘ಯಾಸ್’ ಚಂಡಮಾರುತದ ಭೀತಿ :  ಮೇ 29 ರವರೆಗೆ 25 ರೈಲುಗಳ ಸಂಚಾರ ರದ್ದು

25/05/2021, 07:27

ನವದೆಹಲಿ(reporterkarnataka news) : 

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ‘ಯಾಸ್’ ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆ  ತಿಳಿಸಿದೆ.

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ಬೆಳಿಗ್ಗೆ ರೂಪುಗೊಂಡ ಕಡಿಮೆ ಒತ್ತಡದ ಪ್ರದೇಶವು

ವಾಯುಭಾರ ಕುಸಿತಕ್ಕೆ ತೀವ್ರಗೊಂಡಿದೆ.

ಸೋಮವಾರ ಅದು ಯಾಸ್  ಚಂಡಮಾರುತವಾಗಿ ರೂಪುಗೊಂಡಿದೆ.

ಚಂಡಮಾರುತ ಮೇ 26ರ ಸಂಜೆ ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ ಕರಾವಳಿಗಳನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ

ಡಾ. ಮೊಹಾಪಾತ್ರ ಮಾಹಿತಿ ನೀಡಿದ್ದಾರೆ.

ಚಂಡಮಾರುತದ ಗಾಳಿಯ ವೇಗವು ಗಂಟೆಗೆ ಸುಮಾರು 155-165 ಕಿ.ಮೀ. ಎಂದು ಐಎಂಡಿ ಊಹಿಸಿತ್ತು, ಇದು ಗಂಟೆಗೆ 185 ಕಿ.ಮೀ. ವೇಗದಲ್ಲಿ ಬೀಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು