7:34 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಯಾದಗಿರಿ: ಮಹಿಳೆಯ ಬೆತ್ತಲೆಗೊಳಿಸಿ ತಂಡದಿಂದ ಹಲ್ಲೆ; ಮೈಮೇಲೆ ಕೈಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು 

13/09/2021, 11:27

ಯಾದಗಿರಿ(Reporterkarnataka.com): ಯಾದಗಿರಿ ಜಿಲ್ಲೆಯ ಯಾದಗಿರಿ ಶಹಾಪುರ ಮಾರ್ಗದ ಹೆದ್ದಾರಿಯ ಸಮೀಪ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಭಯಾನಕ ಘಟನೆ ನಡೆದಿದೆ.

ಕಬ್ಬಿನ ಜಲ್ಲೆಯಿಂದ ಥಳಿಸಿದ 4-5 ಮಂದಿಯ ತಂಡ ಮಹಿಳೆಯ ಅಂಗಾಂಗಳ ಮೇಲೆ ಕೈಯಾಡಿಸಿ ವಿಕೃತ ಮೆರೆದ ಬಗ್ಗೆ ವರದಿಯಾಗಿದೆ. ರಾತ್ರಿ ವೇಳೆ ದುಷ್ಕರ್ಮಿಗಳ ತಂಡ ಟಾರ್ಚ್ ಲೈಟ್ ಬೆಳಕಿನಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೊಳಗಾದ ಮಹಿಳೆಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ. ಘಟನೆ ಸಂಬಂಧ ಯಾವುದೇ ದೂರು ಕೂಡ ದಾಖಲಾಗಿಲ್ಲ. 

ಮೇಲ್ನೋಟಕ್ಕೆ ಇದೊಂದು ಹನಿಟ್ರ್ಯಾಪ್ ಸಂಬಂಧವಾಗಿ ನಡೆದ ಹಲ್ಲೆ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಇದು ನಿನ್ನ ವಿಡಿಯೋ ತಾನೇ? ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ. ಜೊತೆಗೆ ವ್ಯಕ್ತಿಯೊಬ್ಬ ನನ್ನಿಂದ 10 ಸಾವಿರ ರೂಪಾಯಿ ಅವಳು ಪಡೆದುಕೊಂಡಿದ್ದಾಳೆ ಎಂದು ಆರೋಪಿಸಿ ಥಳಿಸುತ್ತಿರುವುದು ಕೂಡ ಕಂಡು ಬಂದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು