12:46 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಯಾದಗಿರಿ: ಮಹಿಳೆಯ ಬೆತ್ತಲೆಗೊಳಿಸಿ ತಂಡದಿಂದ ಹಲ್ಲೆ; ಮೈಮೇಲೆ ಕೈಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು 

13/09/2021, 11:27

ಯಾದಗಿರಿ(Reporterkarnataka.com): ಯಾದಗಿರಿ ಜಿಲ್ಲೆಯ ಯಾದಗಿರಿ ಶಹಾಪುರ ಮಾರ್ಗದ ಹೆದ್ದಾರಿಯ ಸಮೀಪ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಭಯಾನಕ ಘಟನೆ ನಡೆದಿದೆ.

ಕಬ್ಬಿನ ಜಲ್ಲೆಯಿಂದ ಥಳಿಸಿದ 4-5 ಮಂದಿಯ ತಂಡ ಮಹಿಳೆಯ ಅಂಗಾಂಗಳ ಮೇಲೆ ಕೈಯಾಡಿಸಿ ವಿಕೃತ ಮೆರೆದ ಬಗ್ಗೆ ವರದಿಯಾಗಿದೆ. ರಾತ್ರಿ ವೇಳೆ ದುಷ್ಕರ್ಮಿಗಳ ತಂಡ ಟಾರ್ಚ್ ಲೈಟ್ ಬೆಳಕಿನಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೊಳಗಾದ ಮಹಿಳೆಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ. ಘಟನೆ ಸಂಬಂಧ ಯಾವುದೇ ದೂರು ಕೂಡ ದಾಖಲಾಗಿಲ್ಲ. 

ಮೇಲ್ನೋಟಕ್ಕೆ ಇದೊಂದು ಹನಿಟ್ರ್ಯಾಪ್ ಸಂಬಂಧವಾಗಿ ನಡೆದ ಹಲ್ಲೆ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಇದು ನಿನ್ನ ವಿಡಿಯೋ ತಾನೇ? ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ. ಜೊತೆಗೆ ವ್ಯಕ್ತಿಯೊಬ್ಬ ನನ್ನಿಂದ 10 ಸಾವಿರ ರೂಪಾಯಿ ಅವಳು ಪಡೆದುಕೊಂಡಿದ್ದಾಳೆ ಎಂದು ಆರೋಪಿಸಿ ಥಳಿಸುತ್ತಿರುವುದು ಕೂಡ ಕಂಡು ಬಂದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು