9:55 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಯಾದಗಿರಿ: ಮಹಿಳೆಯ ಬೆತ್ತಲೆಗೊಳಿಸಿ ತಂಡದಿಂದ ಹಲ್ಲೆ; ಮೈಮೇಲೆ ಕೈಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು 

13/09/2021, 11:27

ಯಾದಗಿರಿ(Reporterkarnataka.com): ಯಾದಗಿರಿ ಜಿಲ್ಲೆಯ ಯಾದಗಿರಿ ಶಹಾಪುರ ಮಾರ್ಗದ ಹೆದ್ದಾರಿಯ ಸಮೀಪ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಭಯಾನಕ ಘಟನೆ ನಡೆದಿದೆ.

ಕಬ್ಬಿನ ಜಲ್ಲೆಯಿಂದ ಥಳಿಸಿದ 4-5 ಮಂದಿಯ ತಂಡ ಮಹಿಳೆಯ ಅಂಗಾಂಗಳ ಮೇಲೆ ಕೈಯಾಡಿಸಿ ವಿಕೃತ ಮೆರೆದ ಬಗ್ಗೆ ವರದಿಯಾಗಿದೆ. ರಾತ್ರಿ ವೇಳೆ ದುಷ್ಕರ್ಮಿಗಳ ತಂಡ ಟಾರ್ಚ್ ಲೈಟ್ ಬೆಳಕಿನಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೊಳಗಾದ ಮಹಿಳೆಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ. ಘಟನೆ ಸಂಬಂಧ ಯಾವುದೇ ದೂರು ಕೂಡ ದಾಖಲಾಗಿಲ್ಲ. 

ಮೇಲ್ನೋಟಕ್ಕೆ ಇದೊಂದು ಹನಿಟ್ರ್ಯಾಪ್ ಸಂಬಂಧವಾಗಿ ನಡೆದ ಹಲ್ಲೆ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಇದು ನಿನ್ನ ವಿಡಿಯೋ ತಾನೇ? ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ. ಜೊತೆಗೆ ವ್ಯಕ್ತಿಯೊಬ್ಬ ನನ್ನಿಂದ 10 ಸಾವಿರ ರೂಪಾಯಿ ಅವಳು ಪಡೆದುಕೊಂಡಿದ್ದಾಳೆ ಎಂದು ಆರೋಪಿಸಿ ಥಳಿಸುತ್ತಿರುವುದು ಕೂಡ ಕಂಡು ಬಂದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು