10:46 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಯಾದಗಿರಿ | ಪಿಎಸ್‌ಐ – ಮಹಿಳಾ ಕಾನ್ಸ್‌ಟೇಬಲ್ ಪ್ರೇಮ ಪ್ರಕರಣ; ಎಸ್‌ಪಿ ಕಚೇರಿ ತಲುಪಿದ ಖಾಕಿ ಕಿತ್ತಾಟ!

06/05/2026, 22:17

ಯಾದಗಿರಿ(reporterkarnataka.com): ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗುಪ್ತಚರ ವಿಭಾಗದ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿರುವ ವೀರೇಶ್ ಹಾಗೂ ರಾಯಚೂರಿನಲ್ಲಿ ಮಹಿಳಾ ಕಾನ್ಸ್‌ಟೇಬಲ್ ನಡುವಿನ ಎಂಟು ವರ್ಷಗಳ ಸುದೀರ್ಘ ಸಂಬಂಧ ಈಗ ರಂಪಾಟವಾಗಿದೆ.
2017ರಲ್ಲಿ ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಇವರ ನಡುವೆ ಪ್ರೇಮಾಂಕುರವಾಗಿತ್ತು. ನಂತರದ ದಿನಗಳಲ್ಲಿ ಇಬ್ಬರೂ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ವೀರೇಶ್ ಪಿಎಸ್‌ಐ ಆಗಿ ಮತ್ತು ಈಕೆ ಕಾನ್ಸ್‌ಟೇಬಲ್ ಆಗಿ ನೇಮಕಗೊಂಡ ಬಳಿಕವೂ ಇವರ ಸಂಬಂಧ ಮುಂದುವರಿದಿತ್ತು.
ಇಬ್ಬರೂ ಸುಮಾರು ನಾಲ್ಕು ವರ್ಷಗಳ ಕಾಲ ರಾಯಚೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ದಂಪತಿಗಳಂತೆ ವಾಸವಿದ್ದರು. ಅಷ್ಟೇ ಅಲ್ಲದೆ, ಒಂದು ದೇವಸ್ಥಾನದಲ್ಲಿ ಸರಳವಾಗಿ ಹಾರ ಬದಲಾಯಿಸಿಕೊಳ್ಳುವ ಮೂಲಕ ಸಾಂಪ್ರದಾಯಿಕವಾಗಿಯೂ ಒಂದಾಗಿದ್ದರು. ಆದರೆ, ಈಗ ಮಹಿಳೆ ಅವರು ಜಾತಿಯ ನೆಪವೊಡ್ಡಿ ಈ ಸಂಬಂಧವನ್ನು ನಿರಾಕರಿಸುತ್ತಿದ್ದಾರೆ ಎಂಬುದು ವೀರೇಶ್ ಅವರ ವಾದ.
ಈ ಇಡೀ ಪ್ರಕರಣದಲ್ಲಿ ಆರ್ಥಿಕ ಮತ್ತು ನೈತಿಕ ವಂಚನೆಯ ಆರೋಪಗಳು ಕೇಳಿಬರುತ್ತಿವೆ. ಮಹಿಳೆ ಅವರು ತಮ್ಮಿಂದ ಹಂತ ಹಂತವಾಗಿ ಸುಮಾರು 35 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದಾರೆ ಎಂದು ವೀರೇಶ್ ದೂರಿದ್ದಾರೆ. ಅಲ್ಲದೆ, ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದಾಗ ಎರಡು ಬಾರಿ ಗರ್ಭಿಣಿಯಾಗಿದ್ದರೂ, ತನಗೆ ಮಾಹಿತಿ ನೀಡದೆಯೇ ಗರ್ಭಪಾತ ಮಾಡಿಸಿಕೊಂಡಿದ್ದಾರೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಈ ಜೋಡಿಯ ಪ್ರೀತಿಯ ಪಯಣ ಈಗ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ತಲುಪಿದೆ. ಇಷ್ಟೆಲ್ಲಾ ವರ್ಷಗಳ ಕಾಲ ಜೊತೆಗಿದ್ದ ಮಹಿಳೆ ಈಗ ವೀರೇಶ್ ಅವರ ಕೈಬಿಟ್ಟು, ಮೇ 7ರಂದು ಮತ್ತೊಬ್ಬ ಯುವಕನೊಂದಿಗೆ ವಿವಾಹವಾಗಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ತನಗೆ ನ್ಯಾಯ ಸಿಗಬೇಕು ಮತ್ತು ಈ ಮದುವೆಯನ್ನು ತಡೆಯಬೇಕು ಎಂದು ಕೋರಿ ಪಿಎಸ್‌ಐ ವೀರೇಶ್ ರಾಯಚೂರು ಎಸ್‌ಪಿ ಅವರಿಗೆ ಆನ್‌ಲೈನ್ ಮೂಲಕ ದೂರು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು