11:18 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಯಜಮಾನನ ಆಕಸ್ಮಿಕ ಸಾವಿನಿಂದ ಆಧಾರಸ್ತಂಭ ಕಳೆದುಕೊಂಡ ಈ ಬಡ ಕುಟುಂಬಕ್ಕೆ ಸಹಾಯ ಮಾಡುವಿರಾ?

03/09/2022, 16:25

ಮಂಗಳೂರು(reporterkarnataka.com)

ಬದುಕು ಒಂದು ಜಟಕಾ ಬಂಡಿ ನಿಲ್ಲದಂತೆ ಸಾಗಿದೆ…ವಿಧಿಯೇ ಅದರ ಡ್ರೈವರ್ ಆಗಿ ಕಾಣದಂತೆ ಕೂತಿದೆ ಎಂಬ ಹಾಡಿದೆ. ಆದರೆ ಈ ವಿಧಿಯಾಟ ಕೆಲವೊಮ್ಮೆ

ಕ್ರೂರವಾಗಿದ್ದರೆ ಬದುಕು ಸಾಗಿಸುವುದೇ ಕಷ್ಟ ಎಂಬ ಪರಿಸ್ಥಿತಿ ಎದುರಾಗುತ್ತದೆ. ಇದಕ್ಕೊಂದು ಉದಾಹರಣೆ ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಬೋರುಗುಡ್ಡೆ ನಿವಾಸಿಯಾದ ಸುಜಾತಾ ಅವರ ಕುಟುಂಬದಲ್ಲಿ ಇತ್ತೀಚೆಗೆ ಘಟಿಸಿದ ಆಕಸ್ಮಿಕ ಘಟನೆ.

ರಿಪೋರ್ಟರ್ ಕರ್ನಾಟಕ ಮೀಡಿಯಾ ನೆಟ್ ವರ್ಕ್(reporterkarnataka.com)ನ ಸಹ ಸಂಸ್ಥೆಯಾದ ಕಿನ್ನರಿ ಕಿಂಡರ್‌ಗಾರ್ಟನ್ ನಲ್ಲಿ ಶಿಕ್ಷಕಿಯ ಸಹಾಯಕಿಯಾಗಿ ದುಡಿಯುತ್ತಿದ್ದ ಸುಜಾತಾ ಅವರ ಪತಿ, 44ರ ಹರೆಯದ ತುಕರಾಮ ಅವರು ಅಧಿಕ ರಕ್ತದೊತ್ತಡದಿಂದ ಬ್ರೈನ್ ಎಮರೇಜ್ ಅಗಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ. ಟೈಲರಿಂಗ್ ವೃತ್ತಿ ಮಾಡುತ್ತಿದ್ದ ತುಕರಾಮ ಅವರಿಗೆ ಬಿಪಿ ಕಾಯಿಲೆ ಬಿಟ್ಟರೆ ಆರೋಗ್ಯವಾಗಿಯೇ ಇದ್ದರು. ಆಗಸ್ಟ್ 20ರಂದು ರಾತ್ರಿವರೆಗೂ ಆರೋಗ್ಯದಿಂದಲೇ ಇದ್ದ ಅವರು ಆಗಸ್ಟ್ 21ರಂದು ಬೆಳಗ್ಗೆ ಅಧಿಕ ರಕ್ತದೊತ್ತಡಕ್ಕೆ ಗುರಿಯಾದರು. ಇದರಿಂದ ಮೆದುಳಿನಲ್ಲಿ ಅಧಿಕ ಪ್ರಮಾಣದಲ್ಲಿ ರಕ್ತ ಸ್ರಾವ ಉಂಟಾಗಿತ್ತು. ತಕ್ಷಣ ಅವರನ್ನು ಸಮೀಪದ ಎ.ಜೆ. ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 21ರಂದು ಬೆಳಗ್ಗೆ ಕೊನೆಯುಸಿರೆಳೆದರು. 
ತುಕರಾಮ ಅವರ ಕುಟುಂಬ ಇಂದು ಅನಾಥವಾಗಿದೆ. ಪತ್ನಿ ಸುಜಾತಾ ಮತ್ತು 10ನೇ ತರಗತಿಯಲ್ಲಿ ಕಲಿಯುತ್ತಿರುವ ಅಪ್ರಾಪ್ತ ವಯಸ್ಸಿನ ಪುತ್ರ ಇದ್ದಾನೆ. ಇರಲು ಸ್ವಂತ ಮನೆಯಿಲ್ಲ, ಸುಜಾತಾ ಅವರಿಗೆ ಅಣ್ಣ ತಮ್ಮಂದಿರಿಲ್ಲ. ಅನಾರೋಗ್ಯಪೀಡಿತ ತಾಯಿ ಇದ್ದಾರೆ. ಬಡ ಕುಟುಂಬದ ಇವರಿಗೆ ಜೀವನ ಸಾಗಿಸುವುದು, ಮಗನಿಗೆ ಶಿಕ್ಷಣ ಕೊಡುವುದು ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಿಪೋರ್ಟರ್ ಕರ್ನಾಟಕ ಸಾರ್ವಜನಿಕರ ನೆರವು ಯಾಚಿಸುತ್ತಿದೆ. ಆ ಮೂಲಕ ಸುಜಾತಾ ಅವರ ಕುಟುಂಬಕ್ಕೆ ನೆರವು ನೀಡುವ ಗುರಿಯನ್ನು ಹೊಂದಿದೆ. ಹಾಗೆ ಈ ಬಡ ಕುಟುಂಬವು ಕೊಡುಗೈ ದಾನಿಗಳು ಹಾಗೂ ಸಹೃದಯಿಗಳ ನೆರವಿನ ನಿರೀಕ್ಷೆಯಲ್ಲಿದೆ.
ನೆರವು ನೀಡುವವರು ಈ ಕೆಳಗಿನ ಖಾತೆ ಸಂಖ್ಯೆಗೆ ಹಣ ಜಮಾಯಿಸಿ ನೊಂದ ಈ ಕುಟುಂಬದೊಂದಿಗೆ ಕೈಜೋಡಿಸುವ ಅಗತ್ಯವಿದೆ.

KARNATAKA BANK, A/C 5062000100037101,
Account type: Current account
IFSC : KARB0000506, BRANCH : KADRI, MANGALURU

ಇತ್ತೀಚಿನ ಸುದ್ದಿ

ಜಾಹೀರಾತು