4:35 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಯಕ್ಷ ಕಲಾವಿದ ಗಣೇಶ್ ಕೊಲೆಕಾಡಿ ಅವರ ಚಿಕಿತ್ಸೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ 50 ಸಾವಿರ ರೂ. ಕೊಡುಗೆ

06/12/2024, 00:25

ಬಂಟ್ವಾಳ(reporterkarnataka.com): ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಅವರ
ಮನೆಗೆ ಭೇಟಿ ನೀಡಿ ಫೌಂಡೇಶನ್ ವತಿಯಿಂದ 50,000 ಸಹಾಯವಧನ ನೀಡಲಾಯಿತು.
ಈ ಮೊದಲು ಕೂಡ ನಮ್ಮ ಫೌಂಡೇಶನ್ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಶ್ರೀಯುತ ರಿಗೆ ಸಹಕಾರ ನೀಡಿದೆ.ಅಷ್ಟೇ ಅಲ್ಲದೆ ಕಳೆದ 6 ವರ್ಷಗಳಿಂದ ಪ್ರತಿ ತಿಂಗಳು 1000 ಚಿಕಿತ್ಸಾ ವೆಚ್ಚಕ್ಕಾಗಿ ಯಕ್ಷಧ್ರುವ ಫೌಂಡೇಶನ್ ನೀಡುತ್ತಿದೆ.
ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ್ ಭಂಡಾರಿ, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ , ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯರಾದ ವಿಜಯ್ ಕುಮಾರ್ ಮೊಯ್ಲೊಟ್ಟು ಉಪಸ್ಥಿತರಿದ್ದರು.
*ಈ ಕಲಾವಿದರು ಕಳೆದ 18 ವರ್ಷಗಳಿಂದ ತೀರಾ ಅನಾರೋಗ್ಯ ದಿಂದ ಇದ್ದಾರೆ. ತಾಯಿ ಕೂಡ ತುಂಬಾ ಪ್ರಾಯದವರಗಿದ್ದು, ಮನೆಯಲ್ಲಿ ಊಟಕ್ಕೂ ಮದ್ದಿಗೂ ಪರದಾಡುವ ಸ್ಥಿತಿ,ಬೇರೆ ಯಾರೂ ಕುಟುಂಬಸ್ಥರು ಇವರಿಗೆ ಇಲ್ಲ.ಇವರು ಕಲಾ ವಲಯಕ್ಕೆ ನೀಡಿದ ಕೊಡುಗೆ ಅಪಾರ.ಇಂತಹ ವಿದ್ವಾಂಸರ ಸ್ಥಿತಿ, ಅವರ ತಾಯಿಯ ಸ್ಥಿತಿ ಚಿಂತಾಜನಕ.*
ತೀರಾ ಸಂಕಷ್ಟದಲ್ಲಿರುವ *ಗಣೇಶ್ ಪೂಜಾರಿ ಕೊಲೆಕಾಡಿ* ಕಲಾವಿದನ ಕಷ್ಟಕ್ಕೆ ನಾವೆಲ್ಲರೂ ಕೈಜೋಡಿಸೋಣ.
ಅವರ ಫೋನ್ ಪೇ ಅಥವಾ ಗೂಗಲ್ ಪೇ ನಂಬರ್
9482130381

ಇತ್ತೀಚಿನ ಸುದ್ದಿ

ಜಾಹೀರಾತು