3:46 PM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಯಕ್ಷ ಕಲಾವಿದ ಗಣೇಶ್ ಕೊಲೆಕಾಡಿ ಅವರ ಚಿಕಿತ್ಸೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ 50 ಸಾವಿರ ರೂ. ಕೊಡುಗೆ

06/12/2024, 00:25

ಬಂಟ್ವಾಳ(reporterkarnataka.com): ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಅವರ
ಮನೆಗೆ ಭೇಟಿ ನೀಡಿ ಫೌಂಡೇಶನ್ ವತಿಯಿಂದ 50,000 ಸಹಾಯವಧನ ನೀಡಲಾಯಿತು.
ಈ ಮೊದಲು ಕೂಡ ನಮ್ಮ ಫೌಂಡೇಶನ್ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಶ್ರೀಯುತ ರಿಗೆ ಸಹಕಾರ ನೀಡಿದೆ.ಅಷ್ಟೇ ಅಲ್ಲದೆ ಕಳೆದ 6 ವರ್ಷಗಳಿಂದ ಪ್ರತಿ ತಿಂಗಳು 1000 ಚಿಕಿತ್ಸಾ ವೆಚ್ಚಕ್ಕಾಗಿ ಯಕ್ಷಧ್ರುವ ಫೌಂಡೇಶನ್ ನೀಡುತ್ತಿದೆ.
ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ್ ಭಂಡಾರಿ, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ , ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯರಾದ ವಿಜಯ್ ಕುಮಾರ್ ಮೊಯ್ಲೊಟ್ಟು ಉಪಸ್ಥಿತರಿದ್ದರು.
*ಈ ಕಲಾವಿದರು ಕಳೆದ 18 ವರ್ಷಗಳಿಂದ ತೀರಾ ಅನಾರೋಗ್ಯ ದಿಂದ ಇದ್ದಾರೆ. ತಾಯಿ ಕೂಡ ತುಂಬಾ ಪ್ರಾಯದವರಗಿದ್ದು, ಮನೆಯಲ್ಲಿ ಊಟಕ್ಕೂ ಮದ್ದಿಗೂ ಪರದಾಡುವ ಸ್ಥಿತಿ,ಬೇರೆ ಯಾರೂ ಕುಟುಂಬಸ್ಥರು ಇವರಿಗೆ ಇಲ್ಲ.ಇವರು ಕಲಾ ವಲಯಕ್ಕೆ ನೀಡಿದ ಕೊಡುಗೆ ಅಪಾರ.ಇಂತಹ ವಿದ್ವಾಂಸರ ಸ್ಥಿತಿ, ಅವರ ತಾಯಿಯ ಸ್ಥಿತಿ ಚಿಂತಾಜನಕ.*
ತೀರಾ ಸಂಕಷ್ಟದಲ್ಲಿರುವ *ಗಣೇಶ್ ಪೂಜಾರಿ ಕೊಲೆಕಾಡಿ* ಕಲಾವಿದನ ಕಷ್ಟಕ್ಕೆ ನಾವೆಲ್ಲರೂ ಕೈಜೋಡಿಸೋಣ.
ಅವರ ಫೋನ್ ಪೇ ಅಥವಾ ಗೂಗಲ್ ಪೇ ನಂಬರ್
9482130381

ಇತ್ತೀಚಿನ ಸುದ್ದಿ

ಜಾಹೀರಾತು