6:28 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಯಕ್ಷ ಕಲಾವಿದ ಗಣೇಶ್ ಕೊಲೆಕಾಡಿ ಅವರ ಚಿಕಿತ್ಸೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ 50 ಸಾವಿರ ರೂ. ಕೊಡುಗೆ

06/12/2024, 00:25

ಬಂಟ್ವಾಳ(reporterkarnataka.com): ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಅವರ
ಮನೆಗೆ ಭೇಟಿ ನೀಡಿ ಫೌಂಡೇಶನ್ ವತಿಯಿಂದ 50,000 ಸಹಾಯವಧನ ನೀಡಲಾಯಿತು.
ಈ ಮೊದಲು ಕೂಡ ನಮ್ಮ ಫೌಂಡೇಶನ್ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಶ್ರೀಯುತ ರಿಗೆ ಸಹಕಾರ ನೀಡಿದೆ.ಅಷ್ಟೇ ಅಲ್ಲದೆ ಕಳೆದ 6 ವರ್ಷಗಳಿಂದ ಪ್ರತಿ ತಿಂಗಳು 1000 ಚಿಕಿತ್ಸಾ ವೆಚ್ಚಕ್ಕಾಗಿ ಯಕ್ಷಧ್ರುವ ಫೌಂಡೇಶನ್ ನೀಡುತ್ತಿದೆ.
ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ್ ಭಂಡಾರಿ, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ , ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯರಾದ ವಿಜಯ್ ಕುಮಾರ್ ಮೊಯ್ಲೊಟ್ಟು ಉಪಸ್ಥಿತರಿದ್ದರು.
*ಈ ಕಲಾವಿದರು ಕಳೆದ 18 ವರ್ಷಗಳಿಂದ ತೀರಾ ಅನಾರೋಗ್ಯ ದಿಂದ ಇದ್ದಾರೆ. ತಾಯಿ ಕೂಡ ತುಂಬಾ ಪ್ರಾಯದವರಗಿದ್ದು, ಮನೆಯಲ್ಲಿ ಊಟಕ್ಕೂ ಮದ್ದಿಗೂ ಪರದಾಡುವ ಸ್ಥಿತಿ,ಬೇರೆ ಯಾರೂ ಕುಟುಂಬಸ್ಥರು ಇವರಿಗೆ ಇಲ್ಲ.ಇವರು ಕಲಾ ವಲಯಕ್ಕೆ ನೀಡಿದ ಕೊಡುಗೆ ಅಪಾರ.ಇಂತಹ ವಿದ್ವಾಂಸರ ಸ್ಥಿತಿ, ಅವರ ತಾಯಿಯ ಸ್ಥಿತಿ ಚಿಂತಾಜನಕ.*
ತೀರಾ ಸಂಕಷ್ಟದಲ್ಲಿರುವ *ಗಣೇಶ್ ಪೂಜಾರಿ ಕೊಲೆಕಾಡಿ* ಕಲಾವಿದನ ಕಷ್ಟಕ್ಕೆ ನಾವೆಲ್ಲರೂ ಕೈಜೋಡಿಸೋಣ.
ಅವರ ಫೋನ್ ಪೇ ಅಥವಾ ಗೂಗಲ್ ಪೇ ನಂಬರ್
9482130381

ಇತ್ತೀಚಿನ ಸುದ್ದಿ

ಜಾಹೀರಾತು