5:48 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಯಕ್ಷಗಾನದ ಅಗ್ರಮಾನ್ಯ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ: 15ರ ಹರೆಯದಲ್ಲೇ ರಂಗ ಪ್ರವೇಶ

12/10/2021, 19:29

ಮಂಗಳೂರು( reporterkarnataka.com): ತೆಂಕುತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ಪದ್ಯಾಣ ಗಣಪತಿ ಭಟ್ಟರು (66) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. 

ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.ಅವರು ‘ಯಕ್ಷರತ್ನ’ ಬಿರುದಿಗೆ  ಭಾಜನರಾಗಿದ್ದರು. ಅವರಿಗೆ ಯಕ್ಷಗಾನ ಮನೆತನದ ಬಳುವಳಿ. ಅಜ್ಜ ಪುಟ್ಟು ನಾರಾಯಣರು ಪ್ರಸಿದ್ಧ ಭಾಗವತರಾಗಿದ್ದರು. ತಂದೆ ಹಿಮ್ಮೇಳ ವಾದಕರಾಗಿದ್ದರು. ಪದ್ಯಾಣ ಮನೆತನ ಸಾಕಷ್ಟು ಕಲಾವಿದರನ್ನು ಈ ಕ್ಷೇತ್ರಕ್ಕೆ ನೀಡಿದೆ. ಪದ್ಯಾಣ ತಿರುಮಲೇಶ್ವರ ಭಟ್- ಸಾವಿತ್ರಿ ದಂಪತಿಯ ಪುತ್ರರಾಗಿ ಜನಿಸಿದ ಅವರಿಗೆ ಮನೆಯೇ ಮೊದಲ ಯಕ್ಷಗಾನ ಪಾಠ ಶಾಲೆಯಾಯಿತು. ಮಾಂಬಾಡಿ ನಾರಾಯಣ ಭಾಗವತರಲ್ಲಿ ಭಾಗವತಿಕೆ ಅಭ್ಯಾಸ ಮಾಡಿ 15ರ ಹರೆಯದಲ್ಲೆ ಯಕ್ಷರಂಗ ಪ್ರವೇಶಿಸಿದರು. ಚೌಡೇಶ್ವರಿ, ಕುಂಡಾವು, ಸುರತ್ಕಲ್, ಮಂಗಳಾದೇವಿ, ಎಡನೀರು, ಹೊಸನಗರ ಹಾಗೂ ಹನುಮಗಿರಿ ಮೇಳಗಳಲ್ಲಿ ಐದು ದಶಕಗಳ ಕಲಾಸೇವೆ ಗೈದಿರುತ್ತಾರೆ. ಕನ್ನಡ, ತುಳು ಎರಡೂ ಭಾಷೆಗಳಲ್ಲಿ ಸಮರ್ಥವಾಗಿ ಭಾಗವತಿಕೆ ಮಾಡಿ ಕಲಾರಸಿಕರ ಮನ ಗೆದ್ದಿದ್ದಾರೆ. ಸಂಗೀತ ಜ್ಞಾನವುಳ್ಳ ಪದ್ಯಾಣರು ಯಕ್ಷಗಾನದ ಪದ್ಯಗಳಿಗೆ ಹೊಸರಾಗ ಸಂಯೋಜನೆ ಮಾಡಿದ್ದಾರೆ. ಶೇಣಿ ಗೋಪಾಲಕೃಷ್ಣ ಭಟ್ಟರ ನೆಚ್ಚಿನ ಭಾಗವತರು. 1500ಕ್ಕೂ ಹೆಚ್ಚು ಧ್ವನಿಸುರುಳಿಗಳಲ್ಲಿ 200ಕ್ಕೂ ಹೆಚ್ಚು ಯಕ್ಷಗಾನದ ವಿಡಿಯೋಗಳಲ್ಲಿ ಇವರ ಸಿರಿಕಂಠದ ಧ್ವನಿ ದಾಖಲಾಗಿದೆ. ಹೊರನಾಡುಗಳಲ್ಲಿ ಹೊರರಾಷ್ಟ್ರಗಳಲ್ಲಿ ಯಕ್ಷಗಾನ ಆಟಕೂಟಗಳಲ್ಲಿ ಭಾಗವಹಿಸಿ ಮಧುರ ಹಾಡುಗಳಿಂದ ಕಾರ್ಯಕ್ರಮ ಕಳೆಗಟ್ಟಿಸಿದ್ದಾರೆ. ಹಿಮ್ಮೇಳದ ಎಲ್ಲ ಅಂಗಗಳಲ್ಲಿ ಪರಿಣಿತರಾದ ಇವರು ಅನೇಕ ಶಿಷ್ಯರಿಗೆ ತರಬೇತಿ ನೀಡಿದ್ದಾರೆ. ಕನ್ನಡಿಕಟ್ಟೆಯಂತಹ ಯುವ ಭಾಗವತರು ಇವರ ಗರಡಿಯಲ್ಲಿ ಸಿದ್ಧಗೊಂಡಿದ್ದಾರೆ. ನಿಡುಗಾಲದ ಯಕ್ಷಗಾನಕ್ಕೆ ಪುರಸ್ಕಾರ ರೂಪವಾಗಿ ಹಲವು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರು. ಉಡುಪಿಯ ಯಕ್ಷಗಾನ ಕಲಾರಂಗ ಅವರಿಗೆ ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ  ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು