7:25 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಯಕ್ಷಗಾನ ಕಲಿಕೆಯಿಂದ ಮನೋಬಲ ವೃದ್ದಿ: ಯಕ್ಷ ಕಲಾವಿದ ಉಲ್ಲಾಸ್ ಆರ್. ಶೆಟ್ಟಿ

26/06/2024, 17:12

ಸುರತ್ಕಲ್(reporterkarnataka.com): ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಪೆರ್ಮುದೆ ಶಾರದ ಯಕ್ಷಗಾನ ಮಂಡಳಿಯ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಹೇಳಿದರು.
ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುತ್ತಾ ಬಂದಿರುವ ಪಟ್ಲ ಪೌಂಡೇಶನ್ ಎಲ್ಲೆಡೆ ಮನೆ ಮಾತಾಗಿದೆ ಇದು ದೇಶ ವಿದೇಶಗಳಲ್ಲಿ ಒಳ್ಳೆಯ ಹೆಸರನ್ನು ಪಡೆದಿದ್ದು ಒಂದು ಉತ್ತಮ ಸಂಘಟನೆಯಾಗಿದೆ. ಈ ಟ್ರಸ್ಟ್‌ ನ ಸಮಾಜಮುಖಿ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದರು. ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಮಾತನಾಡಿ ದಾನಿಗಳ ನೆರವಿನಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಇಷ್ಟರವರೆಗೆ ಅಶಕ್ತ ಕಲಾವಿದರಿಗೆ ಸಹಾಯ ಹಸ್ತ ಮನೆ ನಿರ್ಮಾಣ ಇಂತಹ ಸಮಾಜ ಮುಖಿ ಕೆಲಸಗಳಿಗೆ ಸುಮಾರು 12 ಕೋಟಿವರೆಗೆ ಸಹಾಯಧನ ನೀಡಿದ್ದು ಪ್ರಸಕ್ತ ಟ್ರಸ್ಟ್ ವತಿಯಿಂದ 80 ಶಾಲೆಗಳಲ್ಲಿ ಸುಮಾರು10000 ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಶಿಕ್ಷಣ ತರಬೇತಿ ಯನ್ನು ನೀಡಲಾಗಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು.
ಅತಿಥಿಗಳಲ್ಲಿ ಒಬ್ಬರಾದ ಹರಿಕೃಷ್ಣ ಭಟ್, ಅಸಿಸ್ಟೆಂಟ್ ಮ್ಯಾನೇಜರ್ ಆಪರೇಶನ್ಸ್ ಎಂ ಆರ್ ಪಿ ಎಲ್ ಇವರು ಮಾತನಾಡುತ್ತಾ ರಾಮಾಯಣ ಮಹಾಭಾರತದಂತಹ ಪುರಾಣಗಳಲ್ಲಿನ ಧಾರ್ಮಿಕ ವಿಷಯಗಳನ್ನು ಅರಿಯುವ ಮುಖಾಂತರ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜ್ಞಾನದೊಂದಿಗೆ ನಮ್ಮ ಸಂಸ್ಕೃತಿಯನ್ನು ಉಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು. ಡೆಲ್ಲಿ ಪಬ್ಲಿಕ್ ಸ್ಕೂಲ್ ಇದರ ಉಪ ಪ್ರಾಂಶುಪಾಲೆ ಶ್ರೀಮತಿ ಕೃಪಾ ಸಂಜೀವ್ ಇವರು ಮಾತನಾಡುತ್ತಾ ನಮ್ಮ ಶಾಲೆಯು ಸಾಂಸ್ಕೃತಿಕವಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದೆ.. ಯಕ್ಷ ಶಿಕ್ಷಣ ಮುಖಾಂತರ ಮಕ್ಕಳಿಗೆ ಉಚಿತವಾಗಿ ಯಕ್ಷಗಾನ ತರಬೇತಿ ನೀಡುವ ಯಕ್ಷ ಪಟ್ಲ ಫೌಂಡೇಶನ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ವೇದಿಕೆಯಲ್ಲಿ ಯಕ್ಷ ಶಿಕ್ಷಕರಾದ ರಾಮಚಂದ್ರ ಮುಕ್ಕ, ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಕಾರ್ಯದರ್ಶಿ ಗಂಗಾಧರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಉಪಾಧ್ಯಕ್ಷ ಲೀಲಾಧರ ಶೆಟ್ಟಿ ಕಟ್ಲ ವಹಿಸಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಟ್ರಸ್ಟಿಗಳಾದ ಸವಿತಾ ಭವಾನಿ ಶಂಕರ್ ಶೆಟ್ಟಿ ಬಾಳ, ಕೇಸರಿ ಎಸ್ ಪೂಂಜ, ಸಹನಾ ರಾಜೇಶ್ ರೈ, ವೇದಾವತಿ ನಾರಾಯಣ ಶೆಟ್ಡಿ, ರವಿ ಶೆಟ್ಟಿ ಸುರತ್ಕಲ್, ಪುಷ್ಪರಾಜ ಶೆಟ್ಟಿ ಕಡುಂಬೂರು, ಸುಜಾತ ಎಲ್ ಶೆಟ್ಟಿ, ಜೊತೆ ಕಾರ್ಯದರ್ಶಿ ಸತೀಶ್ ಶೆಟ್ಟಿ ಬಾಳಿಕೆ ಮತ್ತು ಇತರರು ಉಪಸ್ಥಿತರಿದ್ದರು.


ಶಾಲಾ ಶಿಕ್ಷಕಿ ಶ್ರೀಮತಿ ಹಂಸಿನಿ ಇವರು ಧನ್ಯವಾದ ಸಮರ್ಪಿಸಿದರು…
ಶಾಲಾ ಶಿಕ್ಷಕರಾದ ಹೇಮನಾಥ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು