ಇತ್ತೀಚಿನ ಸುದ್ದಿ
Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್
05/03/2025, 09:30

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತ್ಯಾದಿಗಳಿಗೆ ಅನುಮತಿಯನ್ನು ಗೃಹ ಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾಸಭಾ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ವಿ.ಸುನಿಲ್ ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಉಪ ಮುಖ್ಯಮಂತ್ರಿಗಳು ಉತ್ತರಿಸಿದರು.