6:56 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು