3:59 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು