10:20 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು