10:48 AM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು