4:05 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು