6:11 PM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು