1:29 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶಿಷ್ಯರಿಂದ ಭಾಗವತಿಗೆಯ ನುಡಿನಮನ: ಕಣ್ಣಂಚಿನಲ್ಲಿ ಒಸರಿದ ಆಶ್ರುಧಾರೆ

15/08/2021, 19:54

ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಅಭಿಮಾನಿಗಳು ಮತ್ತು ಮೂವರು ಭಾಗವತ ಶಿಷ್ಯರಿಂದ ಭಾಗವತಿಗೆ ಮೂಲಕ ನುಡಿ ನಮನ ಸಲ್ಲಿಸಲಾಯಿತು.

ಧೀರಜ್ ರೈ ಸಂಪಾಜೆ, ರಾಜಾರಾಮ್ ಹೊಳ್ಳ ಕೈರಂಗಳ ಹಾಗೂ ದೇವಿ ಪ್ರಸಾದ್ ಆಳ್ವ ತಲಪಾಡಿ ಭಾಗವತಿಕೆಯ ಮೂಲಕ ನುಡಿನಮನ ಸಲ್ಲಿಸಿದಾಗ ಅಭಿಮಾನಿಗಳ ಕಣ್ಣಂಚಲ್ಲಿ ಅಶ್ರುಧಾರೆ ಧಾರಾಕಾರವಾಗಿ ಇಳಿತು. ಇನ್ನೊಂದು ಕಡೆಯಿಂದ ಪೂಂಜ ಅವರ ಬಂಧು ಮಿತ್ರರ ಆಕ್ರಂಧನ ಕೇಳಿ ಬರುತ್ತಿತ್ತು.

ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಪದವೀಧರರಾಗಿದ್ದ ಅವರು, ನಾಲ್ಕೂವರೆ ದಶಕದಿಂದ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಟೀಲು ಮೇಳದ ಪ್ರಧಾನ ಭಾಗವತರಾಗಿದ್ದ ಅವರಿಗೆ ಈ ಬಾರಿಯ ತಿರುಗಾಟದ ಆರಂಭದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಖ್ಯಾತ ಯಕ್ಷಗಾನ ಪ್ರಸಂಗ ‘ಮಾನಿಷಾದ’ದ ಪ್ರಸಂಗಕರ್ತರು.

ಇತ್ತೀಚಿನ ಸುದ್ದಿ

ಜಾಹೀರಾತು