2:19 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶಿಷ್ಯರಿಂದ ಭಾಗವತಿಗೆಯ ನುಡಿನಮನ: ಕಣ್ಣಂಚಿನಲ್ಲಿ ಒಸರಿದ ಆಶ್ರುಧಾರೆ

15/08/2021, 19:54

ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಅಭಿಮಾನಿಗಳು ಮತ್ತು ಮೂವರು ಭಾಗವತ ಶಿಷ್ಯರಿಂದ ಭಾಗವತಿಗೆ ಮೂಲಕ ನುಡಿ ನಮನ ಸಲ್ಲಿಸಲಾಯಿತು.

ಧೀರಜ್ ರೈ ಸಂಪಾಜೆ, ರಾಜಾರಾಮ್ ಹೊಳ್ಳ ಕೈರಂಗಳ ಹಾಗೂ ದೇವಿ ಪ್ರಸಾದ್ ಆಳ್ವ ತಲಪಾಡಿ ಭಾಗವತಿಕೆಯ ಮೂಲಕ ನುಡಿನಮನ ಸಲ್ಲಿಸಿದಾಗ ಅಭಿಮಾನಿಗಳ ಕಣ್ಣಂಚಲ್ಲಿ ಅಶ್ರುಧಾರೆ ಧಾರಾಕಾರವಾಗಿ ಇಳಿತು. ಇನ್ನೊಂದು ಕಡೆಯಿಂದ ಪೂಂಜ ಅವರ ಬಂಧು ಮಿತ್ರರ ಆಕ್ರಂಧನ ಕೇಳಿ ಬರುತ್ತಿತ್ತು.

ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಪದವೀಧರರಾಗಿದ್ದ ಅವರು, ನಾಲ್ಕೂವರೆ ದಶಕದಿಂದ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಟೀಲು ಮೇಳದ ಪ್ರಧಾನ ಭಾಗವತರಾಗಿದ್ದ ಅವರಿಗೆ ಈ ಬಾರಿಯ ತಿರುಗಾಟದ ಆರಂಭದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಖ್ಯಾತ ಯಕ್ಷಗಾನ ಪ್ರಸಂಗ ‘ಮಾನಿಷಾದ’ದ ಪ್ರಸಂಗಕರ್ತರು.

ಇತ್ತೀಚಿನ ಸುದ್ದಿ

ಜಾಹೀರಾತು