5:34 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶಿಷ್ಯರಿಂದ ಭಾಗವತಿಗೆಯ ನುಡಿನಮನ: ಕಣ್ಣಂಚಿನಲ್ಲಿ ಒಸರಿದ ಆಶ್ರುಧಾರೆ

15/08/2021, 19:54

ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಅಭಿಮಾನಿಗಳು ಮತ್ತು ಮೂವರು ಭಾಗವತ ಶಿಷ್ಯರಿಂದ ಭಾಗವತಿಗೆ ಮೂಲಕ ನುಡಿ ನಮನ ಸಲ್ಲಿಸಲಾಯಿತು.

ಧೀರಜ್ ರೈ ಸಂಪಾಜೆ, ರಾಜಾರಾಮ್ ಹೊಳ್ಳ ಕೈರಂಗಳ ಹಾಗೂ ದೇವಿ ಪ್ರಸಾದ್ ಆಳ್ವ ತಲಪಾಡಿ ಭಾಗವತಿಕೆಯ ಮೂಲಕ ನುಡಿನಮನ ಸಲ್ಲಿಸಿದಾಗ ಅಭಿಮಾನಿಗಳ ಕಣ್ಣಂಚಲ್ಲಿ ಅಶ್ರುಧಾರೆ ಧಾರಾಕಾರವಾಗಿ ಇಳಿತು. ಇನ್ನೊಂದು ಕಡೆಯಿಂದ ಪೂಂಜ ಅವರ ಬಂಧು ಮಿತ್ರರ ಆಕ್ರಂಧನ ಕೇಳಿ ಬರುತ್ತಿತ್ತು.

ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಪದವೀಧರರಾಗಿದ್ದ ಅವರು, ನಾಲ್ಕೂವರೆ ದಶಕದಿಂದ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಟೀಲು ಮೇಳದ ಪ್ರಧಾನ ಭಾಗವತರಾಗಿದ್ದ ಅವರಿಗೆ ಈ ಬಾರಿಯ ತಿರುಗಾಟದ ಆರಂಭದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಖ್ಯಾತ ಯಕ್ಷಗಾನ ಪ್ರಸಂಗ ‘ಮಾನಿಷಾದ’ದ ಪ್ರಸಂಗಕರ್ತರು.

ಇತ್ತೀಚಿನ ಸುದ್ದಿ

ಜಾಹೀರಾತು