6:30 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶಿಷ್ಯರಿಂದ ಭಾಗವತಿಗೆಯ ನುಡಿನಮನ: ಕಣ್ಣಂಚಿನಲ್ಲಿ ಒಸರಿದ ಆಶ್ರುಧಾರೆ

15/08/2021, 19:54

ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಅಭಿಮಾನಿಗಳು ಮತ್ತು ಮೂವರು ಭಾಗವತ ಶಿಷ್ಯರಿಂದ ಭಾಗವತಿಗೆ ಮೂಲಕ ನುಡಿ ನಮನ ಸಲ್ಲಿಸಲಾಯಿತು.

ಧೀರಜ್ ರೈ ಸಂಪಾಜೆ, ರಾಜಾರಾಮ್ ಹೊಳ್ಳ ಕೈರಂಗಳ ಹಾಗೂ ದೇವಿ ಪ್ರಸಾದ್ ಆಳ್ವ ತಲಪಾಡಿ ಭಾಗವತಿಕೆಯ ಮೂಲಕ ನುಡಿನಮನ ಸಲ್ಲಿಸಿದಾಗ ಅಭಿಮಾನಿಗಳ ಕಣ್ಣಂಚಲ್ಲಿ ಅಶ್ರುಧಾರೆ ಧಾರಾಕಾರವಾಗಿ ಇಳಿತು. ಇನ್ನೊಂದು ಕಡೆಯಿಂದ ಪೂಂಜ ಅವರ ಬಂಧು ಮಿತ್ರರ ಆಕ್ರಂಧನ ಕೇಳಿ ಬರುತ್ತಿತ್ತು.

ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಪದವೀಧರರಾಗಿದ್ದ ಅವರು, ನಾಲ್ಕೂವರೆ ದಶಕದಿಂದ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಟೀಲು ಮೇಳದ ಪ್ರಧಾನ ಭಾಗವತರಾಗಿದ್ದ ಅವರಿಗೆ ಈ ಬಾರಿಯ ತಿರುಗಾಟದ ಆರಂಭದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಖ್ಯಾತ ಯಕ್ಷಗಾನ ಪ್ರಸಂಗ ‘ಮಾನಿಷಾದ’ದ ಪ್ರಸಂಗಕರ್ತರು.

ಇತ್ತೀಚಿನ ಸುದ್ದಿ

ಜಾಹೀರಾತು