2:47 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

“ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್ ಜೈಲಿನೊಳಗೆ ಹೋದ

28/07/2021, 18:21

ಮಂಗಳೂರು(reporterkarnatakanews): ಮೊಬೈಲ್ ಫೋನ್ ಮೂಲಕ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ವಿನೋದ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿ ‘ನಗರದ ಪೊಲೀಸ್ ಠಾಣೆಗೆ ಆಟೋರಿಕ್ಷಾ ಚಾಲಕ ತನಗೆ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಜನವರಿ ತಿಂಗಳಿನಲ್ಲಿ ಪೋಷಕರ ಜತೆ ಕಂಕನಾಡಿ ನಗರ ಠಾಣೆಗೆ ತಂದೆಯ ಜೊತೆ ದೂರು ನೀಡಲು ಬಂದಿದ್ದಳು.

ಈ ವೇಳೆ ತನಿಖೆ ವೇಳೆ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಮೆಸೇಜ್ ಮಾಡಿ ‘ನೀನು ಎಲ್ಲಿದ್ದಿಯಾ, ಮನೆಯಲ್ಲಿ ಒಬ್ಬನೇ ಇದ್ದೀನಿ, ನಿನ್ನ ಮನೆಯ ಹತ್ತಿರ ರೌಂಡ್ಸ್ ಬಂದಾಗ ಸಿಗುತ್ತೇನೆ ಎಂದು ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಮಂಗಳೂರು ನಗರ ಠಾಣೆಯ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದರು. ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು