7:54 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಯರಬಳ್ಳಿ ಗ್ರಾಮದ ಮಾರಮ್ಮದೇವಸ್ಥಾನಕ್ಕೆ ಭೂಮಿ ನೀಡಲು ಸಿಎಂಗೆ ಮನವಿ: ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಆದೇಶ

26/11/2021, 12:06

ಬೆಂಗಳೂರು(reporterkarnataka.com) : ರಾಷ್ಟ್ರೀಯ ಹೆದ್ದಾರಿ 150 ಎ ವಿಸ್ತರಣೆಯಿಂದ ಯರಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಸ್ಥಳಾಂತರಗೊಳ್ಳುತ್ತಿದ್ದು, ದೇವಸ್ಥಾನಕ್ಕೆ ಪರ್ಯಾಯ ಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿ ಒತ್ತಾಯಿಸಿದರು.

ದೇವಸ್ಥಾನಕ್ಕೆ ಎದುರುಗಡೆ ಇರುವ ಸರ್ಕಾರಿ ಭೂಮಿಯನ್ನು ನೀಡಬೇಕು ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಐಮಂಗಳ ಹೋಬಳಿಯ ಯರಬಳ್ಳಿ ಗ್ರಾಮದೇವತೆ ಮಾರಮ್ಮ ದೇವಸ್ಥಾನ ಟ್ರಸ್ಟ್ ಸದಸ್ಯರು ಮತ್ತು ಗ್ರಾಮಸ್ಥರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಕುರಿತು ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸರ್ಕಾರದ ಜಾಗವನ್ನು ಮಂಜೂರು ಮಾಡಲು ಆದೇಶಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ ಟಿ.ಜನಾರ್ಧನ್, ಚಿದಾನಂದಯ್ಯ, ಗಿರೀಶ್, ನಾಗರಾಜು, ಎಂ.ಮಂಜುನಾಥ್, ಒ.ಆರ್.ಮಂಜುನಾಥ್, ಚಕ್ರಪಾಣಿ, ಪ್ರಕಾಶ್, ಜಿ.ಸೋಮಶೇಖರಯ್ಯ, ವೀರನಾಯ್ಕ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು