9:38 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

​ಯಾರೂ ಕನ್‌ಫ್ಯೂಸ್ ಆಗಬೇಡಿ, ಮುಖ್ಯಮಂತ್ರಿ ಹೊರಡಿಸಿದ ಹೊಸ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

07/05/2021, 21:20

ಬೆಂಗಳೂರು (Reporter Karnataka News) ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್​ಡೌನ್​.

* ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಹಾಲು, ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ.

*ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ.

*ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ತಳ್ಳುವ ಗಾಡಿಯಲ್ಲಿ ತರಕಾರಿ-ಹಣ್ಣುಗಳನ್ನು ಮಾರಲು ಅವಕಾಶ ನೀಡಲಾಗಿದೆ.

*ಕೈಗಾರಿಕೆ ಹೊಟೇಲ್, ಪಬ್, ಬಾರ್ ಕ್ಲೋಸ್.ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.

*ಸರ್ಕಾರಿ ಕಚೇರಿ ಭಾಗಶ‍ಃ ಕೆಲಸ ಮಾಡಲಿದೆ.

*ಅಗತ್ಯವಸ್ತು ಸಾಗಿಸುವ ವಾಹನಗಳಿಗೆ ಅವಕಾಶವಿದೆ.

*ಅಂತರ್ ಜಿಲ್ಲಾ ಸಂಚಾರಕ್ಕೆ ಸಂಪೂರ್ಣ ನಿಷೇಧ

*ಮೇ 10 ರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳಿಗೆ ಬೀಗ

*ವಿಮಾನ ರೈಲು ಸಂಚಾರಕ್ಕೆ ಅನುಮತಿ

*ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆಗೆ ಮದ್ಯ ಮಾರಾಟಕ್ಕೆ ಅವಕಾಶ

*ಟ್ಯಾಕ್ಸಿ, ಅಟೋ ತುರ್ತು ಸೇವೆಗಳಿಗೆ ಅವಕಾಶ

*ಸಿನಿಮಾ, ಮಾಲ್, ಜಿಮ್ ಎಲ್ಲವೂ ಮೇ 24 ರವರೆಗೂ ಬಂದ್

*ತುರ್ತು ವೈದ್ಯಕೀಯ ಸೇವೆ ಹೊರತು ಪಡಿಸಿ ಎಲ್ಲಾ ರೀತಿಯ ಸಂಚಾರಕ್ಕೆ ನಿರ್ಬಂಧವೇರಲಾಗಿದೆ.

*ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.

*ತಳ್ಳುಗಾಡಿಗಳಲ್ಲಿ ತರಕಾರಿ ಮಾರಲು ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶ

*ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

*ಕ್ರೀಡಾ ಸಮುಚ್ಛಯ, ಸಾರ್ವಜನಿಕ ಈಜುಕೊಳ ಸಂಪೂರ್ಣ ಬಂದ್

*ಈಗಾಗಲೇ ನಿಗದಿಯಾಗಿದ್ದ ಮದುವೆಗಳಿಗೆ ಅವಕಾಶ
ಮದುವೆ ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ

*ರಸ್ತೆ ಕಾಮಗಾರಿಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.

*ಆಸ್ಪತ್ರೆಗಳು, ಮೆಡಿಕಲ್​ ಶಾಪ್​ಗಳು, ಬ್ಯಾಂಕ್​ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಯಾವುದೇ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರುವುದಿಲ್ಲ.

*ಕೈಗಾರಿಕೆಗಳಿಗೆ ಷರತ್ತು ಬದ್ಧ ಅನುಮತಿ

*ಇ- ಕಾಮರ್ಸ್ ಸೇವೆಗಳಿಗೆ ಅವಕಾಶ

*ಹೊಟೇಲ್ ಗಳಿಂದ ಪಾರ್ಸೆಲ್ ತರಲು ಹೋಗಬೇಕಾದರೆ ನಡೆದುಕೊಂಡೆ ಹೋಗಬೇಕು. ವಾಹನಗಳಲ್ಲಿ ಹೋದರೆ ಶಿಕ್ಷೆ

*ಅಗತ್ಯ ಸೇವೆಗಳಿಗೆ ಬಿಟ್ಟು ಅನವಶ್ಯಕವಾಗಿ ವಾಹನಗಳನ್ನು ಚಲಾಯಿಸುವಂತಿಲ್ಲ.

*ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.

*ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ.

*ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.
ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.

*ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.

*ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು