11:29 PM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಯಾರೂ ನನ್ನಲ್ಲಿ ರಾಜೀನಾಮೆ ಕೇಳೂ ಇಲ್ಲ, ತಾನು ಕೊಡುವುದೂ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ನುಡಿ

17/07/2021, 19:18

ಬೆಂಗಳೂರು(reporterkarnataka news): ಮುಂದಿನ ತಿಂಗಳ ಮೊದಲ ವಾರ ತಾನು ಮತ್ತೆ ದೆಹಲಿಗೆ ಭೇಟಿ ನೀಡಲಿದ್ದೇನೆ. ಇದೀಗ ತನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ತಾನು ರಾಜೀನಾಮೆ ಕೊಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿ ಅವರು ಶುಕ್ರವಾರ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದರು. ಜತೆಗೆ ಪುತ್ರ ಬಿ.ಎಸ್. ವಿಜಯೇಂದ್ರ ಕೂಡ ಇದ್ದರು. ಶುಕ್ರವಾರ ಸಂಜೆ ದೆಹಲಿಯ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದರು. ಸುಮಾರು 10 ನಿಮಿಷ ಪ್ರಧಾನಿ ಜತೆ ಮಾತುಕತೆ ನಡೆಸಿದರು.

ನಂತರ ಮಾಧ್ಯಮ ಜತೆ ಮಾತನಾಡಿದ ಯಡಿಯೂರಪ್ಪ, ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಹಲವು ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಧಾನಿ ಜತೆ ಚರ್ಚಿಸಿರುವುದಾಗಿ ಹೇಳಿದರು.

ಈ ಮಧ್ಯೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಯಡಿಯೂರಪ್ಪ ಅವರಿಂದ ಬಿಜೆಪಿ ಹೈಕಮಾಂಡ್ ರಾಜೀನಾಮೆ ಕೇಳಿದೆ ಎಂಬ ಸುದ್ದಿ ಬಿತ್ತರವಾಗಲು ಪ್ರಾರಂಭಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇದರಲ್ಲಿ ಹುರುಳಿಲ್ಲ. ಯಾರೂ ನನ್ನಲ್ಲಿ ರಾಜೀನಾಮೆ ಕೇಳಿಲ್ಲ. ನಾನು ರಾಜೀನಾಮೆ ಕೊಡುವುದೂ ಇಲ್ಲ ಎಂದು ಖಡಾಖಂಡಿತವಾಗಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು