2:01 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

31/03/2026, 20:26

ಬಾಗಲಕೋಟೆ(reporterkarnataka.com): ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದೆ. ಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ ಎಂದು ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದೇ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಲಿಲ್ಲ ಅಧಿಕಾರದಲ್ಲಿದ್ದಾಗ ಜನರಿಗೆ ಸ್ಪಂದಿಸದೆ, ಈಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಮತ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ. ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಉಮೇಶ್ ಮೇಟಿ ಪರ ಪ್ರಚಾರ ಮಾಡಿದ ಅವರು, ನನ್ನ ಆತ್ಮೀಯರೂ-ಪಕ್ಷ ನಿಷ್ಠೆ ಇದ್ದವರಾಗಿದ್ದ ಎಚ್.ವೈ. ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಗೆಲ್ಲಬೇಕು. ನಾನೇ ಚುನಾವಣೆಗೆ ನಿಂತಿದ್ದೀನಿ ಎಂದುಕೊಂಡು ಮತ ಹಾಕಿ ಎಂದು ಮನವಿ ಮಾಡಿದರು. ನುಡಿದಂತೆ ನಡೆದು ಕೆಲಸ ಮಾಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆದರೆ, ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಬಾಕಿ ಉಳಿಸಿದ್ದ 30 ಸಾವಿರ ಕೋಟಿಯಲ್ಲಿ ನಮ್ಮ ಸರ್ಕಾರ 24 ಸಾವಿರ ಕೋಟಿ ರೂಪಾಯಿ ಬಾಕಿ ತೀರಿಸಿದೆ. ಹಣ ಇಲ್ಲದಿದ್ದರೂ ಬಿಜೆಪಿಯವರು ಗುತ್ತಿಗೆ ನೀಡಿ ಹೋದರು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು