1:33 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಏಕರೂಪದ ವೇತನ: ಒಎಂಪಿಎಲ್ ನೌಕರರ ಪ್ರತಿಭಟನೆಗೆ ಶಾಸಕ ಡಾ.ಭರತ್ ಶೆಟ್ಟಿ ಬೆಂಬಲ

17/10/2023, 14:39

ಸುರತ್ಕಲ್(reporter Karnataka.com): ಭೂಮಿ ಕಳೆದುಕೊಂಡ ನೌಕರರಿಗೆ ನ್ಯಾಯಯುತ ವೇತ, ಸೌಲಭ್ಯ ಕೊಡುವುದು ಕಂಪನಿಗಳ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.


ಏಕರೂಪದ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ನಡೆಯುತ್ತಿರುವ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೃಹತ್ ಕಂಪನಿಗಳು ಬಂದರೆ ಸಹಜವಾಗಿ ಉದ್ಯೋಗ ಸಿಗುವ ಆಕಾಂಕ್ಷೆ ಸಹಜವಾಗಿ ಇರುತ್ತದೆ. ಆದರೆ ಸ್ಥಳೀಯರಿಗೆ ಉದ್ಯೋಗದಲ್ಲಾಗಲಿ, ವೇತನದಲ್ಲಾಗಲಿ ತಾರತಮ್ಯ ಮಾಡಬಾರದು. ಎಂಆರ್‍ಪಿಎಲ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲು ತಾನು ಶಾಸಕ ಉಮಾನಾಥ ಕೊಟ್ಯಾನ್ ಅವರೊಂದಿಗೆ ಜತೆಯಾಗಲಿದ್ದೇನೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದರು.
ಈಶ್ವರ್ ಕಟೀಲ್, ಸ್ಥಳೀಯ ಮನಪಾ ಸದಸ್ಯೆ ಸರಿತಾ ಶಶಿಧರ್, ಜಯಂತ್ ತೋಕೂರು,ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು