7:30 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಎಕ್ಕುಟ್ಟಿ ಹೋದ ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್ ಆಗುತ್ತಾ? ದುರಸ್ತಿಗೆ ಕಾಮಗಾರಿಗೆ ಬೇಕಾ 4 ತಿಂಗಳು?

28/06/2022, 18:42

ಭಾನುಪ್ರಿಯ ಹೊಳೆನರಸೀಪುರ ಹಾಸನ

info.reporterkarnataka@gmail.com

ಪ್ರತಿ ಮಳೆಗಾಲದಲ್ಲಿ ಬಂದ್ ಆಗುವ ಮೂಲಕ ಸುದ್ದಿ ಮಾಡುವ ಶಿರಾಡಿ ಘಾಟಿ ಮತ್ತೆ ಈ ಬಾರಿಯೂ ಬಂದ್ ಆಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲು ಶಿರಾಡಿ ಘಾಟಿ ರಸ್ತೆಯನ್ನು ಸುಮಾರು 4 ತಿಂಗಳುಗಳ ಕಾಲ ಬಂದ್ ಮಾಡುವ ಕುರಿತು ಸರಕಾರಿ ಮಟ್ಟದಲ್ಲಿ ಚಿಂತನೆ ನಡೆದಿದೆ.

ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯ ವ್ಯಾಪ್ತಿಗೆ ಸೇರಿದ ಶಿರಾಡಿ ಘಾಟ್ ಪ್ರತಿ ಮುಂಗಾರಿನಲ್ಲೂ ಪ್ರಯಾಣಿಕರಿಗೆ ಸಮಸ್ಯೆ ತಂದೊಡ್ಡುತ್ತದೆ. ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸುರಂಗ ಮಾರ್ಗ ಮಾಡುವ ಪ್ರಸ್ತಾಪವನ್ನು ಕೂಡ ಸರಕಾರ ಮುಂದಿಟ್ಟಿದೆ. ಇದೀಗ ವರ್ಷಾವಧಿ ಜಾತ್ರೆ ತರಹ ಇಲ್ಲಿ ಮಳೆಗಾಲದಲ್ಲಿ ದುರಸ್ತಿ ಕಾಮಗಾರಿ ನಡೆಸುವುದು ವಾಡಿಕೆಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಾಲ್ ನಿಂದ ಮಾರನಹಳ್ಳಿವರೆಗೆ ಸುಮಾರು 14 ಕಿಲೋ ಮೀಟರ್ ಉದ್ದದ ಶಿರಾಡಿ ಘಾಟಿ ರಸ್ತೆ

ಬಂದ್ ಮಾಡಿ, ಕಾಮಗಾರಿ ನಡೆಸಲು ಗುತ್ತಿಗೆದಾರರು ಮನವಿ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.

ಬೆಂಗಳೂರಿನಿಂದ ಪ್ರಯಾಣಿಕರು ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ, ಉಡುಪಿ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಹೋಗಲು ಶಿರಾಡಿಘಾಟ್ ರಸ್ತೆಯೇ ಆಶ್ರಯಿಸಬೇಕಾಗಿದೆ. ಚನ್ನೈ ನಿಂದ  ಮಂಗಳೂರಿಗೆ ಕೂಡ ಇದೇ ಶಿರಾಡಿಘಾಟ್ ಮೂಲಕವೇ ಹಾದು ಹೋಗಬೇಕು. ಆದರೆ ಶಿರಾಡಿಘಾಟ್ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಸುಮಾರು 4 ತಿಂಗಳು ಬೇಕಾಗುತ್ತದೆ. ವಾಹನಗಳು ಸಂಚರಿಸುತ್ತಲೇ ದುರಸ್ತಿ ಮಾಡುವುದು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ 

ಶಿರಾಡಿ ಘಾಟ್ ರಸ್ತೆಯನ್ನು ಬಂದ್ ಮಾಡಬೇಕಾದ ಅನಿವಾರ್ಯತೆ ಉದ್ಭವಿಸಿದೆ. ಒಂದು ವೇಳೆ ಶಿರಾಡಿ ಘಾಟ್ ಬಂದ್ ಆದರೆ ಬದಲಿ ಮಾರ್ಗದ ಮೊರೆ ಹೋಗಬೇಕಾಗುತ್ತದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿ, ಮಂಗಳೂರು ಜಿಲ್ಲಾಧಿಕಾರಿ, ಸ್ಥಳೀಯ ಜನಪ್ರತಿನಿಧಿಗಳು ಈ ಹಿಂದೆಯೂ ಚರ್ಚೆ ನಡೆಸಿದ್ದರು. ಆ ವೇಳೆ ಸ್ಥಳೀಯರು ಶಿರಾಡಿಘಾಟ್ ರಸ್ತೆ ಬಂದ್‍ಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೂಡ ನಡೆಸಿದ್ದರು. ಹೀಗಾಗಿ ಶಿರಾಡಿಘಾಟ್ ರಸ್ತೆ ಬಂದ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

ಹಾಸನದಿಂದ ಸಕಲೇಶಪುರದವರೆಗಿನ ಹೆದ್ದಾರಿ ಕಾಮಗಾರಿ ಕಳೆದ 6 ವರ್ಷದಿಂದ ಕುಂಟುತ್ತ ಸಾಗುತ್ತಿದ್ದು, ಇನ್ನೂ ಕೂಡ ಪೂರ್ತಿಯಾಗಿಲ್ಲ. ಅದೇ ರೀತಿ ಶಿರಾಡಿಘಾಟ್ ರಸ್ತೆ ಕಾಮಗಾರಿ ಕೂಡ ವಿಳಂಭವಾದರೆ, ಪ್ರತಿನಿತ್ಯ ಸಂಚರಿಸುವ ಸ್ಥಳೀಯರಿಗೆ ತೊಂದರೆಯಾಗುತ್ತೆ ಎಂದು ಶಿರಾಡಿ ರಸ್ತೆ ಬಂದ್‍ಗೆ ವಿರೋಧ ವ್ಯಕ್ತವಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು