6:53 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿ ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‌ ಶಿಲಾನ್ಯಾಸ

28/02/2023, 23:46

ಮಂಗಳೂರು(reporterkarnataka.com) : ಮಹಾನಗರಪಾಲಿಕೆ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡ್‌ನ ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿಯ ಮತ್ತು ಕಲ್ಲಕಟ್ಟ ಸದಾಶಿವ ನಗರದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ ನಗರದ ವಿವಿಧ ಕಡೆಗಳಲ್ಲಿ ರಾಜಕಾಲುವೆಗಳ ತಡೆಗೋಡೆ ಮತ್ತು ಚರಂಡಿಗಳ ನಿರ್ಮಾಣಕ್ಕೆಂದೇ 100 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಈ ಮೊತ್ತದಲ್ಲಿ ಕಾಮಗಾರಿಗಳನ್ನು ಮಾಡಿಸಲು ಮುಂದಾಗಿದ್ದಾರೆ. ತಮ್ಮ ಕ್ಷೇತ್ರದ ಜನತೆ ಮಳೆಗಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಗದ್ದೆ, ಬೇಸಾಯ, ಕೃಷಿ ಕಾರ್ಯಗಳು ನಡೆಯುವ ಪ್ರದೇಶಗಳಿಗೆ ಮಾತ್ರ ಸಣ್ಣ ನೀರಾವರಿ ಇಲಾಖೆಯ ಅನುದಾನ ಲಭ್ಯವಿರುತ್ತದೆ. ಆದರೆ ಮಂಗಳೂರು ನಗರದ ಜನರ ಮಳೆಗಾಲದ ಪ್ರವಾಹದ ಸಮಸ್ಯೆ ನಿವಾರಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ ಈ ಅನುದಾನ ಕೊಡಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‍‌ ಕಟೀಲು ಅವರು ಸಹಕಾರ ನೀಡಿದ್ದಾರೆ ಎಂದು ಶಾಸಕ ಕಾಮತ್‌ ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್‍‌ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ, ಯಶೋಧರ್ ಚೌಟ, ಭರತ್ ರಾಜ್‌ ಶೆಟ್ಟಿ, ರೇಖಾ ಶೆಟ್ಟಿ, ಪ್ರೀತಮ್ ತೇಜಸ್ವಿನಿ, ಸುಜಾತಾ ಕೊಟ್ಟಾರಿ, ಚೇತನ್, ಸ್ನೇಹ, ಸುಕೇಶ್‌ ಅಳಪೆ , ಸುಮತಿ, ರಾಘವೇಂದ್ರ ಶೆಟ್ಟಿ, ರಾಮ್ ಎಕ್ಕೂರು, ರವೀಂದ್ರ ರಾವ್, ಕುಮಾರಣ್ಣ, ರಾಜೇಶ್ ಎಕ್ಕೂರು, ರವಿ ಎಕ್ಕೂರು, ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು