6:03 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿ ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‌ ಶಿಲಾನ್ಯಾಸ

28/02/2023, 23:46

ಮಂಗಳೂರು(reporterkarnataka.com) : ಮಹಾನಗರಪಾಲಿಕೆ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡ್‌ನ ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿಯ ಮತ್ತು ಕಲ್ಲಕಟ್ಟ ಸದಾಶಿವ ನಗರದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ ನಗರದ ವಿವಿಧ ಕಡೆಗಳಲ್ಲಿ ರಾಜಕಾಲುವೆಗಳ ತಡೆಗೋಡೆ ಮತ್ತು ಚರಂಡಿಗಳ ನಿರ್ಮಾಣಕ್ಕೆಂದೇ 100 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಈ ಮೊತ್ತದಲ್ಲಿ ಕಾಮಗಾರಿಗಳನ್ನು ಮಾಡಿಸಲು ಮುಂದಾಗಿದ್ದಾರೆ. ತಮ್ಮ ಕ್ಷೇತ್ರದ ಜನತೆ ಮಳೆಗಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಗದ್ದೆ, ಬೇಸಾಯ, ಕೃಷಿ ಕಾರ್ಯಗಳು ನಡೆಯುವ ಪ್ರದೇಶಗಳಿಗೆ ಮಾತ್ರ ಸಣ್ಣ ನೀರಾವರಿ ಇಲಾಖೆಯ ಅನುದಾನ ಲಭ್ಯವಿರುತ್ತದೆ. ಆದರೆ ಮಂಗಳೂರು ನಗರದ ಜನರ ಮಳೆಗಾಲದ ಪ್ರವಾಹದ ಸಮಸ್ಯೆ ನಿವಾರಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ ಈ ಅನುದಾನ ಕೊಡಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‍‌ ಕಟೀಲು ಅವರು ಸಹಕಾರ ನೀಡಿದ್ದಾರೆ ಎಂದು ಶಾಸಕ ಕಾಮತ್‌ ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್‍‌ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ, ಯಶೋಧರ್ ಚೌಟ, ಭರತ್ ರಾಜ್‌ ಶೆಟ್ಟಿ, ರೇಖಾ ಶೆಟ್ಟಿ, ಪ್ರೀತಮ್ ತೇಜಸ್ವಿನಿ, ಸುಜಾತಾ ಕೊಟ್ಟಾರಿ, ಚೇತನ್, ಸ್ನೇಹ, ಸುಕೇಶ್‌ ಅಳಪೆ , ಸುಮತಿ, ರಾಘವೇಂದ್ರ ಶೆಟ್ಟಿ, ರಾಮ್ ಎಕ್ಕೂರು, ರವೀಂದ್ರ ರಾವ್, ಕುಮಾರಣ್ಣ, ರಾಜೇಶ್ ಎಕ್ಕೂರು, ರವಿ ಎಕ್ಕೂರು, ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು