1:11 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿ ರಾಜಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‌ ಶಿಲಾನ್ಯಾಸ

28/02/2023, 23:46

ಮಂಗಳೂರು(reporterkarnataka.com) : ಮಹಾನಗರಪಾಲಿಕೆ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡ್‌ನ ಎಕ್ಕೂರು ಕಂಟ್ರಿ ಕ್ಲಬ್‌ ಹಿಂಬದಿಯ ಮತ್ತು ಕಲ್ಲಕಟ್ಟ ಸದಾಶಿವ ನಗರದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ ನಗರದ ವಿವಿಧ ಕಡೆಗಳಲ್ಲಿ ರಾಜಕಾಲುವೆಗಳ ತಡೆಗೋಡೆ ಮತ್ತು ಚರಂಡಿಗಳ ನಿರ್ಮಾಣಕ್ಕೆಂದೇ 100 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಈ ಮೊತ್ತದಲ್ಲಿ ಕಾಮಗಾರಿಗಳನ್ನು ಮಾಡಿಸಲು ಮುಂದಾಗಿದ್ದಾರೆ. ತಮ್ಮ ಕ್ಷೇತ್ರದ ಜನತೆ ಮಳೆಗಾಲದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಗದ್ದೆ, ಬೇಸಾಯ, ಕೃಷಿ ಕಾರ್ಯಗಳು ನಡೆಯುವ ಪ್ರದೇಶಗಳಿಗೆ ಮಾತ್ರ ಸಣ್ಣ ನೀರಾವರಿ ಇಲಾಖೆಯ ಅನುದಾನ ಲಭ್ಯವಿರುತ್ತದೆ. ಆದರೆ ಮಂಗಳೂರು ನಗರದ ಜನರ ಮಳೆಗಾಲದ ಪ್ರವಾಹದ ಸಮಸ್ಯೆ ನಿವಾರಣೆಗಾಗಿ ಸಣ್ಣ ನೀರಾವರಿ ಇಲಾಖೆಯಿಂದ ಈ ಅನುದಾನ ಕೊಡಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್‍‌ ಕಟೀಲು ಅವರು ಸಹಕಾರ ನೀಡಿದ್ದಾರೆ ಎಂದು ಶಾಸಕ ಕಾಮತ್‌ ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್‍‌ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ, ಯಶೋಧರ್ ಚೌಟ, ಭರತ್ ರಾಜ್‌ ಶೆಟ್ಟಿ, ರೇಖಾ ಶೆಟ್ಟಿ, ಪ್ರೀತಮ್ ತೇಜಸ್ವಿನಿ, ಸುಜಾತಾ ಕೊಟ್ಟಾರಿ, ಚೇತನ್, ಸ್ನೇಹ, ಸುಕೇಶ್‌ ಅಳಪೆ , ಸುಮತಿ, ರಾಘವೇಂದ್ರ ಶೆಟ್ಟಿ, ರಾಮ್ ಎಕ್ಕೂರು, ರವೀಂದ್ರ ರಾವ್, ಕುಮಾರಣ್ಣ, ರಾಜೇಶ್ ಎಕ್ಕೂರು, ರವಿ ಎಕ್ಕೂರು, ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು